Webdunia - Bharat's app for daily news and videos

Install App

ತುಂಗಭದ್ರಾ ಅಣೆಕಟ್ಟೆ ಗೇಟು ಮುರಿತ: ಕಾರಣ ಪತ್ತೆಗೆ ತಜ್ಞರ ತಂಡ ಆಗಮನ

Sampriya
ಸೋಮವಾರ, 9 ಸೆಪ್ಟಂಬರ್ 2024 (17:42 IST)
ಹೊಸಪೇಟೆ: ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್‌ಗೇಟ್ ಮುರಿದು ಕೊಚ್ಚಿಹೋಗಲು ಕಾರಣ ತಿಳಿಯಲು ಕೇಂದ್ರ ಜಲ ಆಯೋಗದ (ಸಿಡಬ್ಲ್ಯುಸಿ) ಮಾಜಿ ಅಧ್ಯಕ್ಷ ಎ.ಕೆ.ಬಜಾಜ್‌ ನೇತೃತ್ವದ ತಾಂತ್ರಿಕ ತಜ್ಞರ ತನಿಖಾ ತಂಡ ಸೋಮವಾರ ಅಣೆಕಟ್ಟೆಗೆ ಬಂದು ವೀಕ್ಷಣೆ ನಡೆಸಿದೆ.

ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್ ಲಿಂಕ್ ಮುರಿದು ಕೊಚ್ಚಿಹೋದ ಪರಿಣಾಮ ಅಪಾರ ಪ್ರಮಾಣದ ನೀರು ನದಿಗೆ ಹರಿಸಲಾಯಿತು. ಈಗಾಗಲೇ ತಾತ್ಕಲಿಕ ಗೇಟ್‌ ಅನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ.

ಇದೀಗ ಸ್ಥಳಕ್ಕೆ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ತಂಡದಲ್ಲಿ ಸುಮಾರು ಆರು ಮಂದಿ ಇದ್ದರು. ಕ್ರಸ್ಟ್‌ಗೇಟ್‌ಗಳ ಸಾಮರ್ಥ್ಯದ ಸಹಿತ ಹಲವು ಆಯಾಮಗಳಲ್ಲಿ ಪರಿಶೀಲನೆ ನಡೆಸಿದರು ಎಂದು ತುಂಗಭದ್ರಾ ಅಣೆಕಟ್ಟೆಯ ಮೂಲಗಳು ತಿಳಿಸಿವೆ.

ವೀಕ್ಷಣೆ ವೇಳೆ ಚೈನ್‌ ಲಿಂಕ್‌ನ ಬಲದೊಂದಿಗೆ ಲಂಬವಾಗಿ ನಿಂತಿದ್ದ ಕ್ರಸ್ಟ್‌ಗೇಟ್ ಕಳಚಿಕೊಳ್ಳಲು ನಿಜವಾಗಿ ಕಾರಣವೇನು, ಮಳೆಗಾಲಕ್ಕೆ ಮೊದಲು ಮತ್ತು ನಂತರ ಗೇಟ್‌ ಮತ್ತು ಚೈನ್‌ಲಿಂಕ್‌ಗಳನ್ನು ಆಗಾಗ್ಗೆ ಪರೀಕ್ಷಿಸಲಾಗುತ್ತಿತ್ತೇ, ಕ್ರಸ್ಟ್‌ಗೇಟ್‌ಗಳ ಆಯಸ್ಸು, ಕೊನೆಯ ಬಾರಿಗೆ ಮಾಡಿದ ದುರಸ್ತಿ ಮೊದಲಾದ ಅಂಶಗಳನ್ನು ತಂಡ ಕೂಲಂಕಷವಾಗಿ ಪರಿಶೀಲಿಸಲಿದ್ದು, ಮುಂದೆ ಇಂತಹ ದುರಂತ ಸಂಭವಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಿಫಾರಸು ಮಾಡಲಿದೆ ಎಂದು ಹೇಳಲಾಗಿದೆ.

ಈ ತಂಡಕ್ಕೆ ವರದಿ ಸಲ್ಲಿಸಲು 15 ದಿನಗಳ ಗಡುವು ನೀಡಲಾಗಿದ್ದು, ಶೀಘ್ರದಲ್ಲೇ ಈ ಸಂಬಂಧ ವರದಿ ಹೊರಬೀಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments