Webdunia - Bharat's app for daily news and videos

Install App

ಹೊಸ ಉದ್ಯಮಕ್ಕೆ ಕೈ ಹಾಕಿದ ಭಟ್ 'ಎನ್' ಭಟ್ ಖ್ಯಾತಿಯ ಅವಳಿ ಸಹೋದರರು

Sampriya
ಮಂಗಳವಾರ, 30 ಜುಲೈ 2024 (17:22 IST)
Photo Courtesy X
ಮಂಗಳೂರು: ವಿಭಿನ್ನ ನಿರೂಪಣಾ ಶೈಲಿ, ಶುದ್ಧ ಸಸ್ಯಹಾರಿ ಅಡುಗೆಗಳನ್ನು ಮಾಡುತ್ತಾ ಖ್ಯಾತಿ ಗಳಿಸಿದ 'ಭಟ್‌ ಎನ್ ಭಟ್' ಯೂಟ್ಯೂಬ್ ಚಾನೆಲ್‌ನ ಅವಳಿ ಸಹೋದರರು ಇದೀಗ ಹೊಸ ಉದ್ಯಮಕ್ಕೆ ಕೈ ಹಾಕಿದ್ದಾರೆ. ಯೂಟ್ಯೂಬ್‌ನಲ್ಲಿ ಸಕ್ಸಸ್ ಆದ ಬೆನ್ನಲ್ಲೇ ಈ ಸಹೋದರರು ತಾವು ತಯಾರಿಸುವ ಉಪ್ಪಿನಕಾಯಿ ಹಾಗೂ ಸಾಂಬಾರ್ ಪೌಡರ್‌ನ ಮಾರಾಟಕ್ಕೆ ಹೊಸ ಅಂಗಡಿಯನ್ನು ತೆರೆದಿದ್ದಾರೆ.

ಕೊರೊನಾ ಸಂಕಷ್ಟದಲ್ಲಿ ಕರ್ನಾಟಕ ಕೇರಳ ಗಡಿ ಜಿಲ್ಲೆಯವರಾಗಿರುವ ಸುದರ್ಶನ್ ಭಟ್ ಮತ್ತು ಮನೋಹರ ಭಟ್ ಬೆದ್ರಡಿ ತಮ್ಮ ಮನೆಯ ಸುತ್ತಾ ಮುತ್ತಾ ಸಿಗುವ ತರಕಾರಿಗಳನ್ನು ಬಳಸಿ ಅಡುಗೆ ಮಾಡಿ ಯೂಟ್ಯೂಬ್‌ ಆರಂಭಿಸಿದರು. ಇವರ ವಿಭಿನ್ನವಾದ ನಿರೂಪಣೆ, ಪಕ್ಕಾ ಕರಾವಳಿ ಶೈಲಿಯ ಅಡುಗೆಗಳು ತುಂಬಾನೇ ಖ್ಯಾತಿ ತಂದುಕೊಟ್ಟಿತು. ತಮ್ಮ ಅಡುಗೆ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ.

ಇವರು ವೃತ್ತಿಯಲ್ಲಿ ವಕೀಲರಾಗಿದ್ದು, ಪ್ರವೃತ್ತಿಯಾಗಿ ಅಡುಗೆ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಈ ಅವಳಿ ಸಹೋದರರು ಹೊಸ ಉದ್ಯಮಕ್ಕೆ ಕಾಲಿಟ್ಟಿದ್ದಾರೆ. ಇಷ್ಟರವರೆಗೆ ಅಡುಗೆ ಮಾಡಿ ಬಡಿಸುತ್ತಿದ್ದ ಈ ಸಹೋದರರು ಇದೀಗ ಉಪ್ಪಿನಕಾಯಿ ಮತ್ತು ಸಾಂಬಾರ್ ಪೌಡರ್ ಸಿದ್ಧ ಮಾಡಿ ಮಾರಾಟಕ್ಕೆ ಇಟ್ಟಿದ್ದಾರೆ.  ಕಾಸರಗೋಡಿನ ಸೀತಂಗೋಳಿ  ಮುಕರಿಕಂಡ ಬಳಿ ಇವರು 'ಭಟ್ ಎನ್ ಭಟ್' ಅಂಗಡಿ ತೆರೆದಿದ್ದಾರೆ.



 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮುಂದಿನ ಸುದ್ದಿ
Show comments