Webdunia - Bharat's app for daily news and videos

Install App

ಒಂದೇ ಏಟಿಗೆ ಎರಡು ಗ್ಯಾರೆಂಟಿ ಢಮಾರ್: ಕಾಂಗ್ರೆಸ್ ನಡೆಯ ವಿರುದ್ಧ ಆರ್‌ ಅಶೋಕ್‌ ಆಕ್ರೋಶ

Sampriya
ಗುರುವಾರ, 21 ನವೆಂಬರ್ 2024 (18:25 IST)
ಬೆಂಗಳೂರು: ಮಾನದಂಡಗಳ ನೆಪದಲ್ಲಿ ದಿಢೀರನೆ ಏಕಾಏಕಿ ಲಕ್ಷಾಂತರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಿರುವ ಕಾಂಗ್ರೆಸ್ ಸರ್ಕಾರದ ನಡೆಯ ಹಿಂದೆ ಬಡವರಿಗೆ ಮೋಸ ಮಾಡುವ ದೊಡ್ಡ ಹುನ್ನಾರವೇ ಅಡಗಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.    

ನಾನಾ ಕಾರಣಗಳಿಂದ ಲಕ್ಷಾಂತರ ಬಿಪಿಎಲ್‌ ಕಾರ್ಡ್‌ಗಳನ್ನು ಎಪಿಎಲ್‌ ಕಾರ್ಡ್‌ಗಳನ್ನಾಗಿ ಪರಿವರ್ತಿಸಲಾಗಿದ್ದು, ಇದರಿಂದ ಗೃಹಲಕ್ಷ್ಮಿಗೂ ಕಂಟಕವಾಗುವ ಮುನ್ಸೂಚನೆಯಿದೆ.  ಇದು ಸರ್ಕಾರದ ಒಂದೇ ಏಟಿಗೆ ಎರಡು ಹಕ್ಕಿಗಳನ್ನು ಹೊಡೆಯುವ ತಂತ್ರ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಪಕ್ಷ ನಾಯಕ ಆರ್‌ ಅಶೋಕ್ ಅವರು ಸರ್ಕಾರದ ನಡೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಪೋಸ್ಟ್‌ನಲ್ಲಿ ಹೀಗಿದೆ: ಒಂದೇ ಏಟಿಗೆ ಎರಡು ಗ್ಯಾರೆಂಟಿ ಢಮಾರ್!

ಮಾನದಂಡಗಳ ನೆಪದಲ್ಲಿ ದಿಢೀರನೆ ಏಕಾಏಕಿ ಲಕ್ಷಾಂತರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಿರುವ ಕಾಂಗ್ರೆಸ್‌ ಸರ್ಕಾರದ ನಡೆಯ ಹಿಂದೆ ಬಡವರಿಗೆ ಮೋಸ ಮಾಡುವ ದೊಡ್ಡ ಹುನ್ನಾರವೇ ಅಡಗಿದೆ.

ಬಿಪಿಎಲ್ ಕಾರ್ಡು ರದ್ದು ಮಾಡುವ ಮೂಲಕ ಅನ್ನಭಾಗ್ಯದ ಹಣಕ್ಕೆ ಕನ್ನ ಹಾಕುವುದರ ಜೊತೆಗೆ, ಗೃಹಲಕ್ಷ್ಮಿ ಹಣಕ್ಕೂ ಕತ್ತರಿ ಹಾಕಲಿದೆ ಈ ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರ.

ನುಡಿದಂತೆ ನಡೆದ ಸರ್ಕಾರ ಎನ್ನುವುದು ಕೇವಲ ಬಿಟ್ಟಿ ಪ್ರಚಾರಕ್ಕೆ ಮಾತ್ರ ಸೀಮಿತವಾಗಿದ್ದು, ನುಡಿಯುವುದು ಒಂದು, ಮಾಡುವುದು ಇನ್ನೊಂದು ಎನ್ನುವುದೇ ಈ ಸರ್ಕಾರದ ನಿಜವಾದ ಅಸಲೀಯತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments