ನೊಂದ ಪ್ರೇಮಿಗಳಿಬ್ಬರು ಆತ್ಮಹತ್ಯೆ! ಮುಂದೇನಾಯ್ತು

Webdunia
ಶುಕ್ರವಾರ, 3 ಡಿಸೆಂಬರ್ 2021 (08:52 IST)
ಮಂಡ್ಯ : ಕೆಆರ್‌ಎಸ್ ಹಿನ್ನೀರಿಗೆ ಹಾರಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಬಳಿ ನಡೆದಿದೆ.
ಮೈಸೂರಿನ ಮೇಟಗಳ್ಳಿಯ ನವೀನ್, ನಿಸರ್ಗ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.
ಸಂಬಂಧಿರಾಗಿದ್ದ ನವೀನ್ ಮತ್ತು ನಿಸರ್ಗ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ನವೆಂಬರ್ 20ರಂದು ನಿಸರ್ಗಳಿಗೆ ಬಲವಂತವಾಗಿ ಬೇರೆ ಯುವಕನ ಜೊತೆ ಮದುವೆ ಮಾಡಲಾಗಿತ್ತು. ಹೀಗಾಗಿ ಮನ ನೊಂದು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿ ಡಿಸೆಂಬರ್ 1ರಂದು ನವೀನ್ ಮತ್ತು ನಿಸರ್ಗ ಇಬ್ಬರೂ ಮನೆಯಿಂದ ನಾಪತ್ತೆಯಾಗಿದ್ದಾರೆ.
ಕುಟುಂಬಸ್ಥರು ಇಬ್ಬರಿಗಾಗಿ ಹುಡುಕಾಟ ನಡೆಸಿದ್ದು ಕೆಆರ್‌ಎಸ್ ನಾರ್ತ್ ಬ್ಯಾಂಕ್ನ ಮಿಲ್ಟ್ರಿ ಕ್ಯಾಂಪ್ ಬಳಿ ಹಿನ್ನೀರಿಗೆ ಬಿದ್ದು ಆತ್ಮಹತ್ಯೆ ಮಾಡಿ ಕೊಂಡಿರುವುದು ತಿಳಿದು ಬಂದಿದೆ. ಇಬ್ಬರೂ ವೇಲ್ನಿಂದ ಕಟ್ಟಿಕೊಂಡು ಹಿನ್ನೀರಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments