Select Your Language

Notifications

webdunia
webdunia
webdunia
webdunia

ಭೀಕರ ಅಪಘಾತಕ್ಕೆ ಇಬ್ಬರು ಬಲಿ

ಭೀಕರ ಅಪಘಾತಕ್ಕೆ ಇಬ್ಬರು ಬಲಿ
bangalore , ಬುಧವಾರ, 16 ಆಗಸ್ಟ್ 2023 (20:16 IST)
ಎರಡು ಬೈಕ್​​ಗಳು ಡಿಕ್ಕಿಯಾಗಿ ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಕೆಂಗೇರಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನರಸಪ್ಪ‌ ಹಾಗೂ ರಕ್ಷಾ ಮೃತ ದುರ್ದೈವಿಗಳಾಗಿದ್ದಾರೆ.. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ 11.40ರ ಸುಮಾರಿಗೆ ರಕ್ಷಾ, ಚಂದನ್ ಜತೆಯಾಗಿ ಪಲ್ಸರ್ ಬೈಕ್​​​ನಲ್ಲಿ ಸ್ಪೀಡಾಗಿ ಹೋಗುತ್ತಿದ್ದರು. ಮಾರುತಿ ನಗರ ಮುಖ್ಯ ರಸ್ತೆಯಲ್ಲಿ ಕೇಲ್‌ಇ ಕಾಲೇಜು ಕಡೆ ಸ್ಪೀಡಾಗಿ ಹೋಗ್ತಿದ್ದರು, ಈ ವೇಳೆ‌ ಅದೇ ರಸ್ತೆಯಲ್ಲಿ ಬರ್ತಿದ್ದ ನರಸಪ್ಪ ಬೈಕ್​​ಗೆ ಚಂದನ್ ಬೈಕ್​ ಡಿಕ್ಕಿ ಹೊಡೆದಿದ್ದಾನೆ. ಈ ಭೀಕರ ಅಪಘಾತದ ಪರಿಣಾಮ ನರಸಪ್ಪಗೆ ಗಂಭೀರ ಗಾಯವಾಗಿ ಘಟನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಚಂದನ್ ಮತ್ತು ರಕ್ಷಾಗೂ ಗಂಭೀರ ಗಾಯಗಳಾಗಿತ್ತು. ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ರಕ್ಷಾ ಅಸುನೀಗಿದ್ದಳು. ಸದ್ಯ ಗಾಯಾಳು ಚಂದನ್​​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇವಸ್ಥಾನದ ಹುಂಡಿ ದೋಚಿದ ಖದೀಮರು