Publish Date: Sun, 26 Feb 2023 (17:54 IST)
Updated Date: Sun, 26 Feb 2023 (18:03 IST)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಕಾಡಾನೆಯೊಂದು ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಂಜಿತಾ ಅವರು ತಾವು ಕೆಲಸ ಮಾಡುತ್ತಿರುವ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಪೇರಡ್ಕ ಹಾಲು ಸೊಸೈಟಿಗೆ ತೆರಳುತ್ತಿದ್ದಾಗ ಅವರ ಮನೆಯ ಸಮೀಪವೇ ಆನೆ ದಾಳಿ ನಡೆಸಿದೆ. ಆಕೆಯ ಕಿರುಚಾಟ ಕೇಳಿ ರಕ್ಷಿಸಲು ಹೋದ ನೈಲಾ ಅವರ ಮೇಲೂ ಆನೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ನೈಲಾ ಸ್ಥಳದಲ್ಲೇ ಮೃತಪಟ್ಟರೆ, ರಂಜಿತಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.