Select Your Language

Notifications

webdunia
webdunia
webdunia
webdunia

ನಗರಸಭೆಯಿಂದ ಅನಧಿಕೃತ ಮಸೀದಿ ಪರಿಶೀಲನೆ

Unauthorized mosque inspection by city council
ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ಆಶ್ರಯ ಯೋಜನೆ ಬಡಾವಣೆಯಲ್ಲಿ ಅನಧಿಕೃತ ಮಸೀದಿ ನಿರ್ಮಾಣ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಸಭೆ ಅಧ್ಯಕ್ಷ್ಯ ವರಸಿದ್ಧಿ ವೇಣುಗೋಪಾಲ್ ಸ್ಥಳ ಪರಿಶೀಲನೆ ನಡೆಸಿದ್ರು. ಅನೇಕ ವರ್ಷಗಳಿಂದ ಇಲ್ಲಿ ಮಸೀದಿ ಇದ್ದು, ಇದು ಅನಧಿಕೃತವಾಗಿ ಕಟ್ಟಲಾಗಿದೆ ಎಂದು ಆರೋಪ ಮಾಡಲಾಗ್ತಿದೆ. ಮಾಹಿತಿ ತಿಳಿದ ಕೂಡಲೇ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್​​​, ನಗರಸಭೆ ಆಯುಕ್ತ ಬಸವರಾಜ್​ ಸ್ಥಳ ಪರಿಶೀಲನೆ ನಡೆಸಿದ್ರು. 3 ದಿನಗಳ ಒಳಗೆ ಮಸೀದಿಗೆ ಸಂಬಂಧಿಸಿದ ದಾಖಲೆ ಹಾಜರುಪಡಿಸುವಂತೆ ಮಸೀದಿ ಆಡಳಿತ ಮಂಡಳಿಗೆ ಅವರು ಸೂಚನೆ ನೀಡಿದ್ದಾರೆ. ಯಾವುದೇ ದಾಖಲೆ ಇಲ್ಲದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ರಸ್ತೆ ಗುಂಡಿ ಮುಚ್ಚಿ ಎಂದ ಪುಟಾಣಿ