Webdunia - Bharat's app for daily news and videos

Install App

ಕೆ ಎಸ್ ಆರ್ ಟಿಸಿ ಬಸ್ ಗಳಲ್ಲಿ ದಟ್ಟನೆ ನಿಯಂತ್ರಿಸಲು ಬಿಎಂಟಿಸಿ ಬಸ್ ಗಳ ಬಳಕೆ

Webdunia
ಶುಕ್ರವಾರ, 20 ಅಕ್ಟೋಬರ್ 2023 (13:34 IST)
ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬ ಹಿನ್ನಲೆ ಪ್ರಯಾಣಿಕರ ಅನುಕೂಲಕ್ಕೆ ಹೊಸ ಪ್ಲಾನ್  ಕೆ ಎಸ್ ಆರ್ ಟಿಸಿ ರೂಪಿಸಿದೆ.ಹಬ್ಬದ ಪ್ರಯುಕ್ತ ಹೊರ ಜಿಲ್ಲೆಗಳಿಗೂ ಬಿಎಂಟಿಸಿ ಬಸ್ ಸಂಚಾರ ಮಾಡುತ್ತೆ .ಅಕ್ಟೋಬರ್ 23-24 ದಸರಾ ಹಬ್ಬದ ಹಿನ್ನಲೆಯಲ್ಲಿ ರಾಜ್ಯದ ವಿವಿಧೆಡೆ ಬಿಎಂಟಿಸಿ ಸಂಚಾರ ಮಾಡಲಿದೆ.ಇಷ್ಟು ದಿನ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಾತ್ರ ಬಿಎಂಟಿಸಿ ಸಂಚಾರ ಮಾಡುತ್ತಿತ್ತು.ಆದ್ರೆ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಹೊರ ಊರುಗಳಿಗೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ.ಹೀಗಾಗಿ ಅ,21,22,23 ವರಿಗೆ ಪ್ರಯಾಣಿಕರ ಅನುಕೂಲಕ್ಕೆ ವಿವಿಧ ಜಿಲ್ಲೆಗಳಿಗೆ ಬಿಎಂಟಿಸಿ ಬಸ್ ಗಳ ಕಾರ್ಯಾಚರಣೆ ಮಾಡಲು ನಿರ್ಧಾರಮಾಡಿದೆ.
 
ದಾವಣಗೆರೆ, ಶಿವಮೊಗ್ಗ, ಹೊಸದುರ್ಗ,ಬಳ್ಳಾರಿ, ಹಾಸನ,ಮತ್ತು ಧರ್ಮಸ್ಥಳ ಕ್ಕೆ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಗಳ ಕಾರ್ಯಾಚರಣೆ ನಡೆಸಲಿದೆ.ನಿತ್ಯ 100 ಬಸ್ ಗಳ ಕಾರ್ಯಾಚರಣೆ ಮಾಡಲು ಬಿಎಂಟಿಸಿ ನಿರ್ಧಾರಮಾಡಿದೆ‌.ಪೂರ್ವ,ಉತ್ತರ,ದಕ್ಷಿಣ, ಹಾಗೂ ಈಶಾನ್ಯ ವಲಯದ ಡಿಪೋಗಳಿಂದ ಬಸ್ ಗಳ ಸೇವೆ ಕಾರ್ಯಾರಂಭ ಮಾಡಲಿದೆ.ಅಕ್ಟೋಬರ್-10 ರಂದು ಕೆಎಸ್ಆರ್ಟಿಸಿ ಯಲ್ಲಿ ನಡೆದ ಸಭೆ ನಿರ್ಧಾರದಂತೆ ಬಸ್ ಓಡಿಸಲು ಸೂಚನೆ ನೀಡಿದ್ದು,ಕೆ ಎಸ್ ಆರ್ ಟಿಸಿ ಮನವಿ ಆಧಾರದ ಮೇಲೆ ಹೊರ ಜಿಲ್ಲೆಗಳಿಗೂ ಬಸ್ ಓಡಿಸಲು ಬಿಎಂಟಿಸಿ ತೀರ್ಮಾನ ಮಾಡಿದೆ.ಕೆ ಎಸ್ ಆರ್ ಟಿಸಿ ಬಸ್ ಗಳಲ್ಲಿ ದಟ್ಟನೆ ನಿಯಂತ್ರಿಸಲು ಬಿಎಂಟಿಸಿ ಬಸ್ ಗಳ ಬಳಕೆ ಮಾಡಲಾಗುತ್ತೆ.ಇದೇ ಮೊದಲ ಬಾರಿಗೆ ಹೊರ ಜಿಲ್ಲೆಗಳಿಗೆ ಬಿಎಂಟಿಸಿ ಬಸ್ ಗಳ ಕಾರ್ಯಾಚರಣೆ ನಡೆಯುತ್ತಿದ್ದು,ಹಬ್ಬದ ಪ್ರಯುಕ್ತ ಮೂರು ದಿನ ಮಾತ್ರ ಬಿಎಂಟಿಸಿ ಬಸ್ ಗಳು ರಾಜ್ಯದ ವಿವಿಧೆಡೆ ಸಂಚಾರ ಮಾಡಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments