Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಬೆಳಗಾವಿಯಲ್ಲಿ ನಡೆಯುತ್ತಿರುವ ಆಪರೇಶನ್ ಚಿತಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.
ಶಿವಮೊಗ್ಗದ ಸಕ್ರೆಬೈಲಿನಿಂದ ಗಜಪಡೆ ಬೆಳಗಾವಿಯತ್ತ ಮುಖಮಾಡಿದೆ. ಮಹಾನಗರದ ಗಾಲ್ಫ್ ಮೈದಾನದಲ್ಲಿ ಚಿರತೆ ಸರ್ಚಿಂಗ್ ಆಪರೇಷನ್ ನಡೆಯುತ್ತಿದ್ದು ಹೈ ಡೆಫೆನೆಶನ್ ಡ್ರೋನ್ ಕ್ಯಾಮರಾಗಳನ್ನು ಬಳಸಲಾಗುತ್ತಿದೆ.
ಕಳೆದ 19 ದಿನಗಳಿಂದ ಕುಂದಾನಗರಿ ಜನರ ನಿದ್ದೆಗೆಡಸಿದ ಚಿರತೆ ಹುಟುಕಾಟಕ್ಕಾಗಿ ಅರಣ್ಯ ಹಾಗೂ ಪೊಲೀಸ್ ಇಲಾಖೆ ಶ್ರಮಪಡುತ್ತಿದೆ. ಸೋಮವಾರ ಎರಡೆರಡು ಬಾರಿ ಮುಖ ದರ್ಶನ ಮಾಡಿದ ಚಿರತೆ ಕಣ್ಣುಮುಚ್ಚಾಲೆ ಆಟವಾಡುತ್ತಿದೆ.
ಚಿರತೆಯನ್ನು ಮಟ್ಟ ಹಾಕಲು ಬೆಂಗಳೂರಿನಿಂದ ಡ್ರೋಣ್ ಎಕ್ಸ್ ಪರ್ಟ್ ಕರೆಸಲಾಗಿದ್ದು ಗಾಲ್ಫ್ ಮೈದಾನದ ಮೇಲೆ ಹದ್ದಿನ ಕಣ್ಣುಗಳಿಂತಿರುವ ಎರಡು ಡ್ರೋನ್ಗಳು ಹಾರಾಟ ನಡೆಸುತ್ತಿವೆ.