Webdunia - Bharat's app for daily news and videos

Install App

ವೈಕುಂಠ ಏಕಾದಶಿ: ತಿರುಪತಿಯಲ್ಲಿ ಭಕ್ತರಿಗೆ 10 ದಿನ ದರ್ಶನ್, ಇಸ್ಕಾನ್ ದೇಗುಲಕ್ಕೆ ಪ್ರವೇಶ ನಿರ್ಬಂಧ

Webdunia
ಮಂಗಳವಾರ, 11 ಜನವರಿ 2022 (21:05 IST)
ತಿರುಮಲ ತಿರುಪತಿ ತಿಮ್ಮಪ್ಪನ ದೇಗುಲದಲ್ಲಿ ಜನವರಿ 13 ರಂದು ವೈಕುಂಠ ಏಕಾದಶಿ. ಜನವರಿ 14 ರಂದು ವೈಕುಂಠ ದ್ವಾದಶಿ ಕೈಂಕರ್ಯಗಳು ನಡೆಯಲಿವೆ. ಈ ಸಂದರ್ಭದಲ್ಲಿ ಬುಧವಾರ ಮಧ್ಯರಾತ್ರಿ ನಂತರ ವೈಕುಂಠ ದ್ವಾರಗಳು ತೆರೆಯಲಿವೆ. ಧನುರ್ಮಾಸದ ಸಂದರ್ಭದಲ್ಲಿ, 12 ರಂದು ಮಧ್ಯರಾತ್ರಿ ನಂತರ ಏಕಾಂತದಲ್ಲಿ ಧನುರ್ಮಾಸ ವಿಧಿಗಳನ್ನು ಅರ್ಚಕರು ನಿರ್ವಹಿಸಲಿದ್ದಾರೆ. ನಂತರ 1.45 ಗಂಟೆಗೆ ಭಕ್ತಾದಿಗಳು ವೈಕುಂಠ ದ್ವಾರ ದರ್ಶನಕ್ಕೆ ಅನುಮತಿ ನೀಡಲಿದ್ದಾರೆ.
ತಿರುಮಲದ ಇತಿಹಾಸದಲ್ಲಿಯೇ ಕಳೆದ ವರ್ಷ ಮೊದಲ ಬಾರಿಗೆ ಹತ್ತು ದಿನಗಳ ಕಾಲ ವೈಕುಂಠ ದ್ವಾರ ತೆರೆದು ಭಕ್ತರಿಗೆ ದರ್ಶನ ಕಲ್ಪಿಸಿತ್ತು. ಈ ಬಾರಿಯೂ ಇದೇ 13 ರಿಂದ 22ರವರೆಗೆ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲು ಟಿಟಿಡಿ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಟಿಟಿಡಿ ಈಗಾಗಲೇ ಭಕ್ತರಿಗೆ 300 ರೂಪಾಯಿ ವಿಶೇಷ ಪ್ರವೇಶ ದರ್ಶನ, ಟೈಮ್‌ ಸ್ಲಾಟ್‌ ಸರ್ವ ದರ್ಶನ ಟೋಕನ್, ಶ್ರೀವಾಣಿ ಬ್ರೇಕ್ ದರ್ಶನ ಟಿಕೆಟ್, ವರ್ಚುವಲ್ ಸೇವಾ ಟಿಕೆಟ್‌ಗಳನ್ನು ನಿಗದಿಪಡಿಸಿದೆ.
ಇನ್ನೊಂದೆಡೆ 13 ರಂದು ಬೆಳಗ್ಗೆ 9 ರಿಂದ 10ರವರೆಗೆ ಶ್ರೀದೇವಿ- ಭೂದೇವಿ ಸಮೇತ ಮಲಯಪ್ಪಸ್ವಾಮಿಯ ಸ್ವರ್ಣ ರಥ ದೇವಸ್ಥಾನದ ಆವರಣದಲ್ಲಿ ಮೆರವಣಿಗೆ ನಡೆಯಲಿದೆ. ವೈಕುಂಠ ಏಕಾದಶಿ ನಿಮಿತ್ತ ಮಂಗಳವಾರ ತಿಮ್ಮಪ್ಪ ದೇಗುಲದಲ್ಲಿ ತಿರುಮಂಜನ (ದೇವಸ್ಥಾನದ ಶುದ್ಧೀಕರಣ) ನಡೆಯಲಿದೆ. ಬಳಿಕ ಭಕ್ತರಿಗೆ ದರ್ಶನ ಪ್ರಾರಂಭವಾಗುತ್ತದೆ.
 
ಇಸ್ಕಾನ್ ದೇವಳಕ್ಕೆ ನಿರ್ಬಂಧ:
ಇನ್ನು ವೈಕುಂಠ ಏಕಾದಶಿಯಂದು ಬೆಂಗಳೂರಿನ ಇಸ್ಕಾನ್ ದೇವಸ್ಥಾನಕ್ಕೆ ಹೆಚ್ಚುತ್ತಿರುವ ಕೋವಿಡ್ ಹಿನ್ನೆಲೆಯಲ್ಲಿ ಪ್ರವೇಶ ನಿಷೇಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments