Webdunia - Bharat's app for daily news and videos

Install App

ಮಳೆ ಬಂದರೂ ತರಕಾರಿ ಬೆಲೆ ಇಳಿಕೆಯಾಗಿಲ್ಲ, ದೈನಂದಿನ ಬಳಕೆಯ ತರಕಾರಿ ಬೆಲೆ ಎಷ್ಟಿದೆ

Krishnaveni K
ಗುರುವಾರ, 13 ಜೂನ್ 2024 (10:49 IST)
ಬೆಂಗಳೂರು: ಬೇಸಿಗೆಯಲ್ಲಿ ನೀರಿಲ್ಲದ ಕಾರಣ ತರಕಾರಿ ಬೆಲೆ ಏರಿಕೆಯಾಗಿದೆ ಎನ್ನಲಾಗುತ್ತಿತ್ತು. ಆದರೆ ಈಗ ಮಳೆ ಬಂದರೂ ತರಕಾರಿ ಬೆಲೆ ಮಾತ್ರ ಬೆಂಗಳೂರಿನಲ್ಲಿ ದಿನೇ ದಿನೇ ಏರಿಕೆಯಾಗುತ್ತಲೇ ಇದೆ.

ಈ ಬಾರಿ ಕೆಲವೆಡೆ ಅತಿಯಾದ ಮಳೆಯಾಗಿ ಬೆಳೆ ಹಾನಿಯಾಗಿದೆ. ಹೀಗಾಗಿ ತರಕಾರಿ ಬೆಲೆ ಮತ್ತೆ ಏರಿಕೆಯಾಗುತ್ತಲೇ ಇದೆ. ಕೆಲವು ದಿನಗಳ ಹಿಂದೆಯೇ ಬೀನ್ಸ್ ಬೆಲೆ 200 ರ ಗಡಿ ದಾಟಿತ್ತು. ಕ್ಯಾರೆಟ್, ಬಟಾಣಿ ಬೆಲೆಯೂ 150 ರ ಗಡಿ ದಾಟಿತ್ತು. ಈಗಿನ ಪ್ರಕಾರ ಬೀನ್ಸ್ ಕೊಂಚ ಇಳಿಕೆಯಾದರೂ ನವಿಲುಕೋಸು,  ಬಟಾಣಿ ಬೆಲೆ 100 ಕ್ಕಿಂತೂ ಹೆಚ್ಚೇ ಇದೆ.

ದೈನಂದಿನವಾಗಿ ಹೆಚ್ಚಾಗಿ ಬಳಕೆಯಾಗುವ ಬೀನ್ಸ್ ,ಕ್ಯಾರೆಟ್, ಬಟಾಣಿ, ಟೊಮೆಟೊ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದೆ. 200 ರ ಗಡಿ ದಾಟಿದ್ದ ಬೀನ್ಸ್ 100 ರೊಳಗೆ ಬಂದು ನಿಂತಿತ್ತು. ಆದರೆ ಈಗ 80-100 ರವರೆಗೆ ಬಂದಿದೆ. ಇದ್ದಿದ್ದರಲ್ಲಿ ಬೆಂಡೆಕಾಯಿ ಮಾತ್ರ ಇಳಿಕೆಯಾಗಿದ್ದು ಸದ್ಯಕ್ಕೆ 30 ರೂ.ವರೆಗೆ ಬಂದು ನಿಂತಿದೆ.

ಕ್ಯಾರಟ್ 80 ರೂ., ನವಿಲುಕೋಸು 100 ರೂ., ದಪ್ಪ ಮೆಣಸಿನಕಾಯಿ 60-70 ರೂ., ಟೊಮೆಟೊ 50 ರೂ., ಆಲೂಗಡ್ಡೆ 40 ರೂ.ವರೆಗೆ ಬಂದು ನಿಂತಿದೆ. ಅಕಾಲಿಕ ಮಳೆಯಿಂದಾಗಿ ಕೆಲವೆಡೆ ಬೆಳೆ ನಷ್ಟವಾಗಿದೆ. ಹೀಗಾಗಿ ಈಗ ತರಕಾರಿ ಬೆಲೆ ಮತ್ತೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments