Publish Date: Tue, 04 Aug 2026 (10:23 IST)
Updated Date: Tue, 04 Aug 2026 (10:27 IST)
ಬೆಂಗಳೂರು: ಸಿಎಂ ಎಂಬ ಕನಿಷ್ಠ ಗೌರವವೂ ಬೇಡವೇ? ಕೇವಲ ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ತಮ್ಮದೇ ಪಕ್ಷದ ನಾಯಕ, ಸಿಎಂ ಡಿಕೆ ಶಿವಕುಮಾರ್ ಗೆ ಅವಹೇಳನಕಾರಿಯಾಗಿ ಘೋಷಣೆ ಕೂಗಿದ್ದಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಚಪ್ಪಲಿ ಏಟು ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.
ನಿನ್ನೆ ಹೈಕಮಾಂಡ್ ನೀಡಿರುವ ಸೂಚನೆಯಂತೆ ಹೊಸ ಸಚಿವರ ಪಟ್ಟಿ ಬಿಡುಗಡೆಯಾಗಿದ್ದು 19 ಸಚಿವರು ಪದಗ್ರಹಣ ಮಾಡಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನ ಸಿಗದ ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
ಆದರೆ ಇವರ ಪ್ರತಿಭಟನೆ ಅತಿರೇಕಕ್ಕೆ ಹೋಗಿದೆ. ಕನಿಷ್ಠ ಮುಖ್ಯಮಂತ್ರಿ ಎಂದು ಬೇಡ, ತಮ್ಮದೇ ಪಕ್ಷದ ನಾಯಕ ಎಂಬುದನ್ನೂ ಮರೆತು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ವಿಶೇಷವಾಗಿ ಪ್ರಿಯಾ ಕೃಷ್ಣ ಬೆಂಬಲಿಗರು ಡಿಕೆ ಶಿವಕುಮಾರ್ ಫೋಟೋ ಹಿಡಿದು ಚಪ್ಪಲಿಯಲ್ಲಿ ಹೊಡೆದು ಪ್ರತಿಭಟನೆ ನಡೆಸಿದ್ದಾರೆ.
ಇಷ್ಟೇ ಆಗಿದ್ದರೆ ಬೇರೆ, ಅವಾಚ್ಯ ಶಬ್ಧಗಳನ್ನು ಬಳಸಿದ್ದಾರೆ. ಡಿಕೆ ಬಾಸ್ ಅಲ್ಲ ಬೋಸುಡಿಕೆ ಎಂದು ಅವಾಚ್ಯವಾಗಿ ಮಾತನಾಡಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಚಿವ ಸ್ಥಾನ ಸಿಗಲಿಲ್ಲವೆಂದು ತಮ್ಮದೇ ನಾಯಕನನ್ನು ಈ ರೀತಿ ನಿಂದಿಸುವುದು ಸರಿಯೇ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ