Publish Date: Sat, 28 Sep 2019 (11:02 IST)
Updated Date: Sat, 28 Sep 2019 (11:05 IST)
ಬಳ್ಳಾರಿ : ಯಾವುದೇ ಕಾರಣಕ್ಕೂ ವಿಜಯನಗರವನ್ನು ಜಿಲ್ಲೆಯಾಗಿ ಘೋಷಣೆ ಮಾಡಬಾರದು. ಅಖಂಡ ಜಿಲ್ಲೆಯಾಗಿ ಇರಬೇಕು ಎಂದು ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, ಆನಂದ್ ಸಿಂಗ್ ರಾಜೀನಾಮೆಗೆ ನೀಡಿದ್ದಕ್ಕೆ ಸರ್ಕಾರ ಹೊಸ ಜಿಲ್ಲೆ ಘೋಷಣೆ ಮಾಡಬಾರದು. ಜಿಲ್ಲೆಯಲ್ಲಿ ನಾಲ್ಕು ಜನ ಬಿಜೆಪಿ ಶಾಸಕರಿದ್ದೇವೆ. ನಮ್ಮನ್ನು ಕರೆದು ಸಿಎಂ ಬಿಎಸ್ವೈ ಚರ್ಚೆ ನಡೆಸಬೇಕು. ಈಗಾಗಲೇ ಸಿಎಂಗೆ ಸಲಹೆ ನೀಡಿದ್ದೇವೆ. ಯಾವುದೇ ಕಾರಣಕ್ಕೂ ವಿಜಯನಗರ ಜಿಲ್ಲೆ ಘೋಷಣೆ ಮಾಡಬಾರದು. ಅಖಂಡ ಜಿಲ್ಲೆಯಾಗಿ ಇರಬೇಕು ಎಂದು ನಾವು ಒತ್ತಾಯ ಮಾಡಿದ್ದೇವೆ ಎಂದು ಹೇಳಿದ್ದಾರೆ.
ನವೆಂಬರ್ ತಿಂಗಳಲ್ಲಿ ಹಂಪಿ ಉತ್ಸವ ಆಚರಣೆ ಮಾಡುತ್ತೇವೆ. ಜಿಲ್ಲಾ ಉಸ್ತುವಾರಿ ಲಕ್ಷ್ಮಣ ಸವದಿ ಜೊತೆ ಈ ಸಂಬಂಧ ಚರ್ಚೆ ನಡೆಸುತ್ತೇವೆ. ಈ ಹಿಂದೆ ಹಂಪಿ ಉತ್ಸವ ಆಚರಣೆಗಾಗಿ ಪ್ರತಿಭಟನೆ ನಡೆಸಿದ್ದೆವು. ಈಗಲೂ ಹಂಪಿ ಉತ್ಸವ ಆಚರಣೆ ಮಾಡದಿದ್ದರೆ ಹೋರಾಟ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.