Webdunia - Bharat's app for daily news and videos

Install App

Vijayapura: ಕೆಲಸಕ್ಕೆ ತಡವಾಗಿ ಬಂದಿದ್ದಕ್ಕೆ 3 ಕಾರ್ಮಿಕರಿಗೆ ಹಿಗ್ಗಾಮುಗ್ಗಾ ಒದೆ: ವಿಡಿಯೋ

Krishnaveni K
ಮಂಗಳವಾರ, 21 ಜನವರಿ 2025 (14:27 IST)
ವಿಜಯಪುರ: ಕೆಲಸಕ್ಕೆ ತಡವಾಗಿ ಬಂದ ತಪ್ಪಿಗೆ ಮೂವರು ಕಾರ್ಮಿಕರನ್ನು ಮಾಲಿಕ ತನ್ನ ಚೇಲಾಗಳೊಂದಿಗೆ ಸೇರಿಕೊಂಡು ಹಿಗ್ಗಾ ಮುಗ್ಗಾ ಥಳಿಸಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಸಂಬಂಧ ಆರೋಪಿ ಮಾಲಿಕನನ್ನು ಅರೆಸ್ಟ್ ಮಾಡಲಾಗಿದೆ.

ಇಟ್ಟಿಗೆ ಭಟ್ಟಿಯಲ್ಲಿ ಮೂವರು ಕಾರ್ಮಿಕರನ್ನು ಕೂಡಿ ಹಾಕಿ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ. ವಿಜಯಪುರದ ಹೊರವಲಯದಲ್ಲಿ ಗಾಂಧಿ ನಗರದ ಸ್ಟಾರ್ ಚೌಕ್ ಬಳಿ ಇಟ್ಟಿಗೆ ಭಟ್ಟಿ ಮಾಲಿಕ ಈ ಕೃತ್ಯವೆಸಗಿದ್ದಾನೆ.

ಕಾರ್ಮಿಕರ ಕೈ ಕಾಲು ಕಟ್ಟಿ ಹಾಕಿ ಕೂಡಿ ಹಾಕಿದ್ದಲ್ಲದೆ, ಮಾಲಿಕ ಮತ್ತು ಮಗ ಸೇರಿಕೊಂಡು ಅಮಾನುಷವಾಗಿ ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆ ನಡೆಸಿದ್ದಾರೆ. ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೇ ಎಚ್ಚೆತ್ತುಕೊಂಡ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಹಲ್ಲೆಗೊಳಗಾದ ಕಾರ್ಮಿಕರಾದ ಬಸಪ್ಪ, ಉಮೇಶ ಮತ್ತು ಸದಾಶಿವ ಎಂಬವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾಲಿಕ ಖೇಮು ರಾಠೋಡರನ್ನು ಅರೆಸ್ಟ್ ಮಾಡಲಾಗಿದೆ. ಸಂಕ್ರಾಂತಿ ಹಬ್ಬದ ನಿಮಿತ್ತ ಕಾರ್ಮಿಕರು ಊರುಗಳಿಗೆ ತೆರಳಿದ್ದರು. ಜನವರಿ 15 ರಂದು ಕೆಲಸಕ್ಕೆ ಬರಲು ಮಾಲಿಕ ಕರೆ ಮಾಡಿದ್ದ. ಆಗ ಕಾರ್ಮಿಕರು ಹಬ್ಬದ ಖರ್ಚಿಗೆ ಹಣ ಕೇಳಿದ್ದರು. ಇದಕ್ಕೆ ಒಪ್ಪುವಂತೆ ನಾಟಕ ಮಾಡಿದ್ದ ಮಾಲಿಕ ಖೇಮು ರಾಠೋಡ ಕಾರ್ಮಿಕರನ್ನು ಇಟ್ಟಿಗೆ ಭಟ್ಟಿಗೆ ಬರಲು ಹೇಳಿದ್ದ.

ಬಂದಾಗ ಮೂವರನ್ನೂ ಕೈ ಕಾಲು ಕಟ್ಟಿ ರೂಂನಲ್ಲಿ ಕೂಡಿ ಹಾಕಿದ್ದಾನೆ. ಬಳಿಕ ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿದ್ದಾನೆ. ಅದೂ ಸಾಲದೆಂಬಂತೆ ತಾವು ಹಲ್ಲೆ ನಡೆಸಿದ ದೃಶ್ಯವನ್ನು ಸೆರೆ ಹಿಡಿದು ಆರೋಪಿಗಳೇ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments