Webdunia - Bharat's app for daily news and videos

Install App

ರಾಜ್ಯ ಸರ್ಕಾರದ ದೋಖಾ ಜನರಿಗೆ ತಿಳಿಸಲು ಜನಾಕ್ರೋಶ ಯಾತ್ರೆ: ವಿಜಯೇಂದ್ರ

Krishnaveni K
ಸೋಮವಾರ, 7 ಏಪ್ರಿಲ್ 2025 (12:17 IST)
ಬೆಂಗಳೂರು: ಮೈಸೂರಿನಲ್ಲಿ ಇವತ್ತು ಮಧ್ಯಾಹ್ನ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ 3 ಗಂಟೆ ನಂತರ ಭ್ರಷ್ಟ- ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ ಯಾತ್ರೆಗೆ ಕೇಂದ್ರದ ಸಚಿವ ಪ್ರಲ್ಹಾದ್ ಜೋಶಿ ಅವರು ಚಾಲನೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ  ಅವರು ತಿಳಿಸಿದ್ದಾರೆ.

ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯಾತ್ರೆಯಲ್ಲಿ ನಮ್ಮ ಪಕ್ಷದ ಎಲ್ಲ ಹಿರಿಯ ಮುಖಂಡರು ಭಾಗವಹಿಸುತ್ತಾರೆ. ಜನಾಕ್ರೋಶ ಯಾತ್ರೆ 4 ಹಂತಗಳಲ್ಲಿ ನಡೆಯಲಿದೆ. ಇವತ್ತು ಮೈಸೂರು, ನಾಳೆ ಮಂಡ್ಯ, ಹಾಸನ, ನಾಡಿದ್ದು ಮಡಿಕೇರಿ, ಮಂಗಳೂರು- ಹೀಗೆ ಪ್ರತಿ ಜಿಲ್ಲಾ ಕೇಂದ್ರಗಳಿಗೆ ನಮ್ಮ ಜನಾಕ್ರೋಶ ಯಾತ್ರೆ ತೆರಳುತ್ತದೆ ಎಂದರು.

ಅಯೋಗ್ಯ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ, ಮುಸ್ಲಿಮರಿಗೆ ಸರಕಾರಿ ಕಾಮಗಾರಿಗಳಲ್ಲಿ ಮೀಸಲಾತಿ, ದಲಿತರ ಅಭ್ಯುದಯಕ್ಕೆ ಮೀಸಲಿಟ್ಟ ಎಸ್‍ಇಪಿ, ಟಿಎಸ್‍ಪಿ ಹಣದ ವಿಚಾರದಲ್ಲಿ ದೋಖಾ ಸೇರಿ ಜನವಿರೋಧಿ ನೀತಿಯನ್ನು ರಾಜ್ಯದ ಜನರಿಗೆ ತಿಳಿಸುತ್ತೇವೆ ಎಂದು ವಿವರಿಸಿದರು.

ಬಿಜೆಪಿ- ಜೆಡಿಎಸ್ ಮಧ್ಯೆ ಒಡಕಿಲ್ಲ. ಇದು ನಮ್ಮ ಪಕ್ಷದ ಹೋರಾಟ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ನಮ್ಮ ಹೋರಾಟಕ್ಕೆ ಆಡಳಿತ ಪಕ್ಷದವರು ಗೌರವ ಕೊಡಬೇಕೆಂದು ನಿರೀಕ್ಷೆ ಮಾಡುವ ದಡ್ಡರು ನಾವಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಅಸ್ತಿತ್ವದ ಪ್ರಶ್ನೆ ಕಾಡುತ್ತಿದೆ. ಬಿಜೆಪಿ ಈಗ ವಿಶ್ವದ ಅತಿ ದೊಡ್ಡ ಪಕ್ಷವೆನಿಸಿದೆ. ದೇಶದಲ್ಲಿ 400ಕ್ಕೂ ಹೆಚ್ಚು ಸಂಸದರಿದ್ದ ಕಾಂಗ್ರೆಸ್ ಪಕ್ಷಕ್ಕೆ ಇವತ್ತು ಎಂಥ ಪರಿಸ್ಥಿತಿ ಬಂದಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಬಿಜೆಪಿಗೆ ಅಸ್ತಿತ್ವದ ಪ್ರಶ್ನೆ ಕಾಡುತ್ತಿಲ್ಲ. ಬಿಜೆಪಿ ಸುಭದ್ರವಾಗಿದೆ ಎಂದು ನುಡಿದರು.
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments