Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಶಿಗ್ಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ BJP ಅಭ್ಯರ್ಥಿಯಾಗಿದ್ದು, ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಇನ್ನೂ ಘೋಷಣೆಯಾಗಿಲ್ಲ. ಸಿಎಂ ಮಣಿಸಲು ಘಟಾನುಘಟಿ ಅಭ್ಯರ್ಥಿಯನ್ನು ನಿಲ್ಲಿಸಲು ಕಾಂಗ್ರೆಸ್ ತಯಾರಿ ನಡೆಸಿದೆ. ಸಿಎಂ ಬೊಮ್ಮಾಯಿ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆ ಮಾಡ್ತಾರ ಎಂಬ ಚರ್ಚೆ ಜೋರಾಗಿ ಕೇಳಿ ಬರುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾರೆಂದು ಸಿಎಂ ಕೂಡ ಟೆನ್ಷನ್ ಆಗಿದ್ದಾರೆಂಬ ಮಾತುಗಳು ಕೇಳಿ ಬಂದಿದೆ. ಬಿಜೆಪಿ ಹೈಕಮಾಂಡ್ ರೀತಿ ಕಾಂಗ್ರೆಸ್ ಕೂಡ ಟಕ್ಕರ್ ಕೊಡುತ್ತಾ ಎಂಬುದು ಸದ್ಯದ ಪ್ರಶ್ನೆಯಾಗಿದೆ. ಬೊಮ್ಮಾಯಿ ಲಿಂಗಾಯತ ಸಮುದಾಯದವರಾದ್ರೂ ಪಂಚಮಸಾಲಿ ಅಲ್ಲ... ಆದರೆ ವಿನಯ್ ಕುಲಕರ್ಣಿ ಪಂಚಮಸಾಲಿ ಸಮುದಾಯದವರಾಗಿದ್ದಾರೆ. ಶಿಗ್ಗಾವಿಯಲ್ಲಿ 65 ಸಾವಿರಕ್ಕೂ ಹೆಚ್ಚು ಪಂಚಮಸಾಲಿ ಮತಗಳಿವೆ. ಆದ್ರಿಂದ ಕಾಂಗ್ರೆಸ್ ವಿನಯ್ ಕುಲಕರ್ಣಿಗೆ ಮಣೆ ಹಾಕುವ ಸಾಧ್ಯತೆಯಿದೆ.