ಕರ್ನಾಟಕದಲ್ಲಿ ಮೊದಲ ಕೇಸ್ ಪತ್ತೆ

Webdunia
ಗುರುವಾರ, 2 ಡಿಸೆಂಬರ್ 2021 (15:13 IST)
ಕರೊನಾ, ಡೆಲ್ಟಾ ಸೋಂಕಿನ ಭೀತಿ ನಡುವೆ ವಿಶ್ವದೆಲ್ಲೆಡೆ ಮತ್ತಷ್ಟು ತಲ್ಲಣ ಮೂಡಿಸಿರುವ ಒಮಿಕ್ರಾನ್​ ಕರ್ನಾಟಕಕ್ಕೂ ವಕ್ಕರಿಸಿದೆ. ರೂಪಾಂತರಿ ಹೊಸ ವೈರಸ್​ ಒಮಿಕ್ರಾನ್​ ಗುರುವಾರ ರಾಜ್ಯದ ಇಬ್ಬರಲ್ಲಿ ದೃಢಪಟ್ಟಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.ಸೋಂಕಿತರ ಪೈಕಿ ಒಬ್ಬನ ವಯಸ್ಸು 66, ಮತ್ತೊಬ್ಬನ ವಯಸ್ಸು 46. ಇವರಿಬ್ಬರೂ ದಕ್ಷಿಣ ಆಫ್ರಿಕಾದಿಂದ ಕರ್ನಾಟಕಕ್ಕೆ ಬಂದಿದ್ದಾರೆ. ತಪಾಸಣೆ ಮಾಡಿದಾಗ ಇಬ್ಬರಲ್ಲೂ ಒಮಿಕ್ರಾನ್​ ಸೋಂಕು ದೃಢಪಟ್ಟಿದೆ. ಆ ಮೂಲಕ ಭಾರತ ದೇಶದಲ್ಲೇ ಇದು ಮೊದಲ ಪ್ರಕರಣ ಆಗಿದೆ.
 
ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್​ ಅಗರ್​ವಾಲ್​ ಅವರು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಖಚಿತ ಪಡಿಸಿದ್ದಾರೆ. ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಲಾಗಿದ್ದು, ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಜನತೆ ಭಯ ಪಡಬೇಡಿ. ಆದರೆ ಜಾಗ್ರತೆ ವಹಿಸಿ ಎಂದು ತಿಳಿಸಿದ್ದಾರೆ.
 
ದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿ, ಕರ್ನಾಟಕದಲ್ಲಿ ಒಮಿಕ್ರಾನ್​ ಕೇಸ್​ ಪತ್ತೆಯಾಗಿದ್ದರ ಕುರಿತು ಮಾತನಾಡಿದ್ದಾರೆ. ಕರ್ನಾಟಕಕ್ಕೆ ಇದೊಂದು ದೊಡ್ಡ ಸವಾಲು. ಒಮಿಕ್ರಾನ್​ ತಡೆಯೋ ಬಗ್ಗೆ ತಜ್ಞರ ಜತೆ ಚರ್ಚಿಸಿದ್ದೇವೆ, 13 ದೇಶದಲ್ಲಿ ಒಮಿಕ್ರಾನ್​ ಹೆಚ್ಚಾಗಿದೆ. ಪ್ರತಿ ವಿದೇಶಿ ಪ್ರವಾಸಿಗರ ಮೇಲೆ ನಿಗಾ ಇಟ್ಟಿದ್ದೇವೆ. ವಿದೇಶದಿಂದ ಬಂದವರಿಗೆ 7 ದಿನ ಕ್ವಾರಂಟೈನ್​ ಮಾಡಲಾಗುತ್ತಿದೆ. ಮಾನಮ್ಮ ಜನರ ಆರೋಗ್ಯ ರಕ್ಷಣೆಯನೇ ನಮ್ಮ ಆದ್ಯ ಕರ್ತವ್ಯ. ಒಬ್ಬನಿಂದ ಇಡೀ ನಗರಕ್ಕೆ ಸೋಂಕು ಹರಡುವುದನ್ನು ತಡೆಯಬೇಕು ಎಂದು ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments