ವೈರಸ್ ರೂಪಾಂತರ ತಡೆಗಟ್ಟಲು ಆಗುವುದಿಲ್ಲ : ಅಶ್ವಥ್ ನಾರಾಯಣ

Webdunia
ಮಂಗಳವಾರ, 26 ಅಕ್ಟೋಬರ್ 2021 (14:42 IST)
ಬೆಂಗಳೂರು,ಅ.26 : ಈಗಾಗಲೇ ರಾಜ್ಯದಲ್ಲಿ ಸಾಕಷ್ಟು ಜನರಿಗೆ ಕೋವಿಡ್ ಲಸಿಕೆ ನೀಡಿರುವುದರಿಂದ ಹೊಸ ರೂಪಾಂತರಿ ಎವೈ4.2 ವೈರಸ್ನಿಂದ ಹೆಚ್ಚಿನ ಆತಂಕ ಎದುರಾಗುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಿದಾಗ ಮ್ಯೂಟೇಷನ್ ಹೆಚ್ಚಾಗುತ್ತದೆ.
ರೂಪಾಂತರ ಆಗುವುದನ್ನು ತಡೆಗಟ್ಟಲು ಆಗುವುದಿಲ್ಲ. ಜನರು ರೋಗ ನಿರೋಧಕ ಲಸಿಕೆ ಪಡೆಯುವ ಮೂಲಕ ಕೊರೊನಾ ನಿಯಂತ್ರಿಸಬಹುದು. ಪ್ರಕೃತಿಯಲ್ಲಿರುವ ಕೋಟ್ಯಂತರ ವೈರಸ್ಗಳಲ್ಲಿ ಇದು ಕೂಡ ಒಂದಾಗಿದೆ ಎಂದರು. ಹೊಸ ತಳಿಯ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಹೊರಗಿನಿಂದ ಬರುವವರಿಗೆ ಈಗಾಗಲೇ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ.
ಮತ್ತಷ್ಟು ನಿರ್ಬಂಧ ವಿಧಿಸಿದರೆ ಕಷ್ಟವಾಗಲಿದೆ. ದುಬೈ ಪ್ರವಾಸದ ವೇಳೆ ನಾನೇ ನಿರ್ಬಂಧವನ್ನು ಅನುಭವಿಸಿದ್ದೇನೆ. ಹೋಗುವಾಗಲೂ ಆರ್ಟಿಪಿಸಿಆರ್ ಟೆಸ್ಟ್, ಬರುವಾಗಲೂ ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ವ್ಯಾಪಕವಾಗಿ ಸೋಂಕು ಹರಡಿರುವ ಕಡೆ ಪರೀಕ್ಷಿಸಿ ಬಿಡುವಂತಾಗಬೇಕು ಎಂದರು.
ಸಮಾಜದಲ್ಲಿ ಇಂತಹ ಕೆಲಸ ಮಾಡಬೇಕು, ಅಂತಹ ಕೆಲಸ ಮಾಡಬೇಕೆಂಬ ತಾರತಮ್ಯ ಹೋಗಬೇಕೆಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಯಾರು ಯಾವ ಕೆಲಸವನ್ನಾದರೂ ಮಾಡಬಹುದು. ತಮಗಿಷ್ಟವಾದ ಕೆಲಸ ಮಾಡಲು ಬಿಡಬೇಕು ಎಂಬುದು ವಿದ್ಯಾರ್ಥಿಯ ಭಾವನೆಯಾಗಿದೆ. ಸಮಾಜದಲ್ಲಿ ಸುಧಾರಣೆಯಾಗುತ್ತಿದ್ದು, ಇನ್ನಷ್ಟು ಸಮಯ ಬೇಕಾಗುತ್ತದೆ.
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಇಂತಹ ಅವಕಾಶಗಳು ಸಿಗುತ್ತವೆ. ಯಾರಿಗೆ ಯಾವ ಕ್ಷೇತ್ರದಲ್ಲಿ ಆಸಕ್ತಿಯಿದೆಯೋ ಆ ಕ್ಷೇತ್ರದಲ್ಲಿ ಕೆಲಸ ಮಾಡಲು ಶಾಲೆಯ ಅವಯಲ್ಲೇ ಆಯ್ಕೆ ಮಾಡಿಕೊಂಡು ಮುಂದೆ ಸಾಗುವ ಅವಕಾಶವಿದೆ. ಮುಂದಿನ ಹತ್ತು ವರ್ಷದ ಅವಧಿಯಲ್ಲಿ ಈ ರೀತಿಯ ಸುಧಾರಣೆಯನ್ನು ನಾವು ಕಾಣಬಹುದು ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂ, ಕೇರಳ, ಪುದುಚೇರಿ ಚುನಾವಣೆ: ಮತದಾರರನ್ನು ಒಲಿಸಿಕೊಳ್ಳಲು ನಾಯಕರ ಕೊನೆ ಹಂತದ ಪ್ರಯತ್ನ ಅಂತ್ಯ

ಇಂದು ರಾತ್ರಿ ಇಡೀ ದೇಶ ನಾಶ ಎಂದು ಬೆದರಿಕೆ ಹಾಕಿದ ಟ್ರಂಪ್: ಇರಾನ್ ಜನತೆ ಮಾಡುತ್ತಿರುವುದೇನು ಗೊತ್ತಾ Video

ಬಿಜೆಪಿ, ಆರ್‌ಎಸ್‌ಎಸ್‌ ಕುರಿತು ಪ್ರಚೋದನಾಕಾರಿ ಭಾಷಣ: ಖರ್ಗೆ ಬಂಧನಕ್ಕೆ ಆಗ್ರಹ

ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments