Publish Date: Fri, 07 Sep 2018 (16:45 IST)
Updated Date: Fri, 07 Sep 2018 (16:48 IST)
ಬಂದರು ನಗರಿ ಮಂಗಳೂರಿಗೆ ಸಿಎಂ ಭೇಟಿ ನೀಡಿದ್ದಾರೆ.
ಭಾರಿ ಮಳೆಯಿಂದ ಹಾನೀಗೀಡಾದ ಉಡುಪಿ, ಮಂಗಳೂರುಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ
ಬಳಿಕ ಉಡುಪಿಗೆ ತೆರಳಿದರು.
ಉಡುಪಿಯಲ್ಲಿ ಬೆಳಿಗ್ಗೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದರು. ಜಿಲ್ಲೆಯ ಅಭಿವೃದ್ಧಿ ಮಳೆಯಿಂದಾದ ಹಾನಿ, ಮತ್ತಿತರ ಯೋಜನೆಗಳ ಕುರಿತು ಚರ್ಚೆ ನಡೆಸಿದರು.
ಮಂಗಳೂರುನಲ್ಲಿಯೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಅಧಿಕಾರಿಗಳಿಗೆ ಅಭಿವೃದ್ಧಿಗೆ ವೇಗ ನೀಡುವಂತೆ ಸೂಚನೆ ನೀಡಿದರು.