Webdunia - Bharat's app for daily news and videos

Install App

ಪ್ರಾತ್ಯಕ್ಷಿಕೆ ವೇಳೆ ವಿವಿಪ್ಯಾಟ್‍ನಲ್ಲಿ ದೋಷ; ಅಸಮಾಧಾನ ವ್ಯಕ್ತಪಡಿಸಿದ ವಿವಿಧ ಪಕ್ಷದ ಮುಖಂಡರು

Webdunia
ಗುರುವಾರ, 29 ಮಾರ್ಚ್ 2018 (07:33 IST)
ರಾಯಚೂರು : ರಾಯಚೂರಿನ ಕ್ರಾಫ್ಟ್ ಹಾಲ್‍ನಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮತ್ತು ಮಾಧ್ಯಮಗಳಿಗೆ ಪ್ರಾತ್ಯಕ್ಷಿಕೆ ಏರ್ಪಡಿಸಿದ್ದು, ಈ ಪ್ರಾತ್ಯಕ್ಷಿಕೆಯ ಸಂದರ್ಭದಲ್ಲಿ ವಿವಿಪ್ಯಾಟ್‍ನಲ್ಲಿ ದೋಷಗಳು ಕಂಡುಬಂದಿರುವ ಮಾಹಿತಿ ತಿಳಿದುಬಂದಿದೆ.


ಈ ಪ್ರಾತ್ಯಕ್ಷಿಕೆ ವೇಳೆಯ ಆರಂಭದಲ್ಲಿ ಬ್ಯಾಲೆಟ್ ಬಾಕ್ಸ್ ಮೂಲಕ 2 ಮತ ಹಾಕಲಾಯಿತು. ಆದರೆ ವಿವಿಪ್ಯಾಟ್ ನಲ್ಲಿ ಯಾವ ಸಂಖ್ಯೆ ಮತ ಹಾಕಲಾಗಿದೆಯೋ ಆ ಸಂಖ್ಯೆ ಕಾಣಿಸದೇ ಬೇರೆ ಸಂಖ್ಯೆ ಕಾಣಿಸಿದೆ. ಈ ದೋಷ ಕಂಡುಬಂದ ಕೂಡಲೇ ವಿವಿಪ್ಯಾಟ್ ಬದಲಿಸಿ ಬೇರೊಂದು ವಿವಿಪ್ಯಾಟ್ ತಂದು ಪ್ರಾತ್ಯಕ್ಷಿಕೆ ನಡೆಸಲಾಯಿತು. ನಂತರ ಒಟ್ಟು 27 ಮತಗಳನ್ನು ಚಲಾವಣೆ ಮಾಡಿದ್ದು ವಿವಿಪ್ಯಾಟ್ ನಲ್ಲಿ ಸರಿಯಾಗಿ ತೋರಿಸಿದೆ.


ಈ ದೋಷಕ್ಕೆ ಇವಿಎಂ ಯಂತ್ರದ ಬ್ಯಾಟರಿ ಕಡಿಮೆಯಿರುವುದು ಅಥವಾ ಪ್ರಿಂಟರ್ ಸಮಸ್ಯೆಯಿಂದ ಹೀಗೆ ಆಗುತ್ತದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು ತಿಳಿಸಿದ್ದಾರೆ. ಆದರೆ ಮತಯಂತ್ರಗಳಲ್ಲಿ ದೋಷಕಂಡುಬಂದಿರುವುದಕ್ಕೆ ವಿವಿಧ ಪಕ್ಷದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments