Webdunia - Bharat's app for daily news and videos

Install App

ಯುದ್ಧ ಸನ್ನಿವೇಶ; ಕರ್ತವ್ಯದ ಕರೆಗೆ ಓಗೊಟ್ಟ ವೀರ ಸೈನಿಕರು

Webdunia
ಗುರುವಾರ, 28 ಫೆಬ್ರವರಿ 2019 (20:38 IST)
ಭಾರತ ಮತ್ತು ಪಾಕಿಸ್ತಾನ ದೇಶದ ನಡುವೆ ಯುದ್ಧ ಸನ್ನಿವೇಶ ನಿರ್ಮಾಣವಾಗಿದೆ. ಈ ಸಾಧ್ಯತೆ ಹಿನ್ನೆಲೆ ಧೀಡಿರನೆ ಸೇನಾಧಿಕಾರಿಗಳಿಂದ ಸೈನಿಕರಿಗೆ ಬುಲಾವ್ ಬಂದಿದೆ. ರಜಾ ಎಂದು ಬಂದ ಸೈನಿಕರನ್ನು ಸೇನೆ ವಾಪಸು ಕರೆಯಿಸಿಕೊಳ್ಳುತ್ತಿದೆ. ರಜೆಕ್ಕೆಂದು ಬಂದಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸೈನಿಕರು ಇಂದು ಮತ್ತೆ ಸೇನೆ ಸೇರಿಕೊಳ್ಳಲು ರೈಲಿನ ಮುಖಾಂತರ ಪಯಣ ಬೆಳೆಸಿದರು.

ಯಾದಗಿರಿ ಜಿಲ್ಲೆಯ ಸುರಪುರ ನಗರದ ನಿವಾಸಿ ರಾಜಮಣಿ ಹಾಗೂ ಮಧ್ಯಪ್ರದೇಶ ಮೂಲದ ರಾಜೇಶ್ ಎನ್ನುವ ಯೋಧ CRSF ತುಕಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ರಾಜಮಣಿ ಕಳೆದ ಎರಡು ದಿನಗಳಿಂದ ಸಂಬಂಧಿ ರಾಜೇಶ್ ನೊಂದಿಗೆ ಯಾದಗಿರಿಗೆ ಬಂದಿದ್ದರು. ದೇಶದ ಪ್ರಮುಖ ನಗರಗಳಲ್ಲಿ  ಹೈ ಅಲರ್ಟ್ ಘೋಷಣೆ ಹಿನ್ನೆಲೆ ಸೇನಾಧಿಕಾರಿಗಳಿಂದ ಬುಲಾವ್ ಬಂದ ಕಾರಣ ಧೀಡಿರನೆ ಬೆಂಗಳೂರಿಗೆ ಪ್ರಯಾಣ ಬೆಳಿಸಿದ್ದಾರೆ.

ಇನ್ನೂ ರಾಜಮಣಿಯ ಹೆಂಡತಿ, ನಾದಿನಿ, ಅಳಿಯ ಎಲ್ಲರೂ ದೇಶದ ಬೆರೆ ಬೆರೆ ಗಡಿಯಲ್ಲಿ BSF, CRSF ತುಕಡಿಯಲ್ಲಿ ಸೈನಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ರಾಜಮಣಿ ಹಾಗೂ ರಾಜೇಶ್ ರನ್ನು ಬೆಂಗಳೂರು ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣದ ರಕ್ಷಣೆಗೆ ನೇಮಿಸಲಾಗಿದೆ. ಬೆಳಿಗ್ಗೆಯಿಂದ ಕರ್ತವ್ಯಕ್ಕೆ ಹಾಜರಾಗಲಿದ್ದೇವೆ, ನಮ್ಮ ದೇಶದ ರಕ್ಷಣೆಗಾಗಿ ನಾವು ಎಂಥ ತ್ಯಾಗಕ್ಕೂ ಸಿದ್ಧ ಎಂದು ಸೈನಿಕರು ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments