ಕೊರೊನಾ ಹರಡದಂತೆ ನಿಗಾ ವಹಿಸಿ : ಈಶ್ವರಪ್ಪ

Webdunia
ಭಾನುವಾರ, 23 ಜನವರಿ 2022 (17:16 IST)
ಶಿವಮೊಗ್ಗ : ಕೊರೊನಾ ಹರಡದಂತೆ ತಡೆಯಲು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾ ಇರಿಸಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಭಾನುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕುರಿತು ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ತಜ್ಞ ವೈದ್ಯರ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿ ಪ್ರಕಾರ ಶಾಲಾ ಕಾಲೇಜುಗಳನ್ನು ನಡೆಸಬೇಕು. ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುವ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಅವರ ಅನುಮತಿ ಪಡೆದ ಬಳಿಕ ರಜೆ ನೀಡಬಹುದಾಗಿದೆ.

ಅನಾರೋಗ್ಯದಿಂದ ಗೈರು ಹಾಜರಾಗುವ ವಿದ್ಯಾರ್ಥಿಗಳಿಗೆ ಹಾಜರಾತಿಯನ್ನು ಕಡ್ಡಾಯಗೊಳಿಸಬಾರದು. ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿರಂತರ ನಿಗಾ ವಹಿಸಬೇಕು ಎಂದು ತಿಳಿಸಿದರು. 

ಜಿಲ್ಲೆಯಲ್ಲಿ ಲಸಿಕೆ ಪಡೆದವರ ಪ್ರಮಾಣ ರಾಜ್ಯಮಟ್ಟಕ್ಕೆ ಹೋಲಿಸಿದರೆ ಕಡಿಮೆಯಿದೆ. ಅಭಿಯಾನದ ರೀತಿಯಲ್ಲಿ ಲಸಿಕೆಯನ್ನು ಪ್ರತಿಯೊಬ್ಬರಿಗೂ ನೀಡಬೇಕು. ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಮೂರನೇ ಡೋಸ್ ನೀಡುವ ಕಾರ್ಯವನ್ನು ಚುರುಕುಗೊಳಿಸಬೇಕು.

ಜಿಲ್ಲೆಯಲ್ಲಿ ಪ್ರಸ್ತುತ ಪಾಸಿಟಿವ್ ವ್ಯಕ್ತಿಗಳ ಹೋಂ ಕ್ವಾರಂಟೈನ್ ಪ್ರಮಾಣ ಶೇ.95ರಷ್ಟಿದ್ದು, ಪ್ರಾಥಮಿಕ ಸಂಪರ್ಕಿತರಿಗೆ ಕನಿಷ್ಟ 3 ದಿನ ಹೋಂ ಕ್ವಾರಂಟೈನ್ ಖಾತ್ರಿಪಡಿಸಬೇಕು. ಹೋಂ ಕ್ವಾರಂಟೈನ್ನಲ್ಲಿ ಇರುವವರಿಗೆ ಅಗತ್ಯ ಔಷಧಿಗಳನ್ನು ಒಳಗೊಂಡ ಕಿಟ್ ಕಡ್ಡಾಯವಾಗಿ ಒದಗಿಸಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಯುಗಾದಿ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ: ಕೋಡಿಶ್ರೀಗಳ ಶಾಕಿಂಗ್ ಭವಿಷ್ಯ

ಮುಂದಿನ ಸುದ್ದಿ
Show comments