ರಾಮನಗರ ಅಭಿವೃದ್ಧಿ ಮಾಡಿದು ನಾವು -ಹೆಚ್.ಡಿ. ಕೆ.

Webdunia
ಸೋಮವಾರ, 3 ಜನವರಿ 2022 (16:21 IST)
ರಾಮನಗರ ಜಿಲ್ಲೆಯನ್ನು ಅಭಿವೃದ್ಧಿ ಮಾಡಿದ್ದು ನಾನು. ನೀವು ಯಾಕೆ ಕಿತ್ತಾಡುತ್ತಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
 
ರಾಮನಗರದ ವೇದಿಕೆಯಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಮತ್ತು ಬಿಜೆಪಿ ಸಚಿವ ಅಶ್ವತ್ಥ ನಾರಾಯಣ ರಾಮನಗರ ಅಭಿವೃದ್ಧಿ ವಿಷಯದಲ್ಲಿ ವಾಗ್ದಾದ ನಡೆಸಿದ ಘಟನೆಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾನು ರಾಮನಗರ ಅಭಿವೃದ್ಧಿ ಮಾಡಿದೆ.
ನಾನು ಮುಖ್ಯಮಂತ್ರಿಯಾಗಿದ್ದಾಗ ರಾಜೀವ್ ಗಾಂಧಿ ಹೆಲ್ತ್ ಯೂನಿವರ್ಸಿಟಿ ಅನುಮೋದನೆ ಮಾಡಿದ್ದೆ. ರಾಮನಗರ ಜಿಲ್ಲೆಗೆ ನರ್ಸಿಂಗ್ ಮೆಡಿಕಲ್ ಕಾಲೇಜು ಮಂಜೂರು ಮಾಡಿದ್ದೆ. ಇದಕ್ಕಾಗಿ 360 ಕೋಟಿ ರೂ. ಅನುದಾನವನ್ನೂ ಬಿಡುಗಡೆ ಮಾಡಿದ್ದೆ. ನಮ್ಮ ಸರ್ಕಾರ ಇಳಿಯುತ್ತಿದ್ದಂತೆಯೇ ಎಲ್ಲವನ್ನೂ ನಿಲ್ಲಿಸಿಬಿಟ್ಟರು ಎಂದು ಕುಮಾರಸ್ವಾಮಿ ಆರೋಪಿಸಿದರು.
 
ನಾನು ಇಳಿದ ನಂತರ 8 ವರ್ಷ ಬಿಜೆಪಿ ಸರ್ಕಾರ ಅಧಿಕಾರ ಮಾಡಿದೆ. 5 ವರ್ಷ ಕಾಂಗ್ರೆಸ್‌ ಸರ್ಕಾರ ಇತ್ತು. ಅವರಿಬ್ಬರೂ ರಾಮನಗರಕ್ಕೆ ಏನು ಮಾಡಿದರು ಎಂದು ಹೇಳಲಿ. ನಾನು ಅನುಮೋದನೆ ಮಾಡಿದ್ದ ಆಸ್ಪತ್ರೆ ಕಟ್ಟಿಸಿದ್ದರೆ ಕೋವಿಡ್ ಸಂದರ್ಭದಲ್ಲಿ ಎಷ್ಟು ಪ್ರಾಣ ಉಳಿಸಬಹುದಿತ್ತು ಎಂದು ಅವರು ವಿಷಾದಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಹುದ್ದೆಯಿಂದ ಕೆಳಗಿಳಿಯುವುದು ಅತ್ಯಂತ ಸುಲಭ, ಆದರೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಗ್ಗೆ ಸರ್ಕಾರ ಮೂಲಗಳಿಂದ ಮಹತ್ವದ ಸುಳಿವು

ಬೆಳ್ತಂಗಡಿ ಸುಮಂತ್ ಸಾವು ಪ್ರಕರಣ: ಶಂಕಿತ ಆರೋಪಿಗಳ ಬ್ರೈನ್ ಮಾಪಿಂಗ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್

ಕೊನೆಗೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಬಗ್ಗಿತಾ ಕೇಂದ್ರ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಸಮಯ ಕೇಳಿದ ಸರ್ಕಾರ

ವಿದ್ಯಾರ್ಥಿಯ ಮೇಲೆ ಪೆಲೆಟ್ ಗನ್, ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments