Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಬಿಬಿಎಂಪಿ ಕೇಂದ್ರ ಕಛೇರಿಯ ಆವರಣದ ಮುಂಭಾಗದಲ್ಲಿ ಪಾಲಿಕೆ ಆಡಳಿತಗಾರ ರಾಕೇಶ್ ಸಿಂಗ್ ಚಾಲನೆ ನೀಡಿದರು.
ಅಭಿಯಾನದ ಅಂಗವಾಗಿ ಪಾಲಿಕೆ ಅಧಿಕಾರಿ, ನೌಕರರುಗಳು, 1000ಕ್ಕೂ ಹೆಚ್ಚು ಅಧಿಕಾರಿಗಳು ಭಾಗವಹಿಸಿ "ನಾಡಗೀತೆ", "ಬಾರಿಸು ಕನ್ನಡ ಡಿಂಡಿಮವ", "ನಿತ್ಯೋತ್ಸವ" ಹಾಗೂ "ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು" ಎಂಬ ಗೀತೆಗಳನ್ನು ಹಾಡಲಾಯಿತು ಹಾಗೂ ಸಂಕಲ್ಪ ವನ್ನು ತೆಗೆದುಕೊಳ್ಖಲಾಯಿತು.