Webdunia - Bharat's app for daily news and videos

Install App

ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಅದಕ್ಕೆ ಈ ಮೂರು ಅಂಶವೇ ಕಾರಣ

Krishnaveni K
ಶುಕ್ರವಾರ, 22 ನವೆಂಬರ್ 2024 (09:48 IST)
ಬೆಂಗಳೂರು: ಕರ್ನಾಟಕದಲ್ಲಿ ಉಪಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಒಂದು ವೇಳೆ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋತರೆ ಅದಕ್ಕೆ ಈ ಮೂರು ಅಂಶಗಳೇ ಕಾರಣವಾಗಲಿದೆ.

ನಾಳೆ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರಿನಲ್ಲಿ ನಡೆದಿದ್ದ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ನಿಂದ ಸಿಪಿ ಯೋಗೇಶ್ವರ್, ಶಿಗ್ಗಾಂವಿಯಲ್ಲಿ ಯಾಸಿರ್ ಪಠಾಣ್ ಮತ್ತು ಸಂಡೂರಿನಲ್ಲಿ ಅನ್ನಪೂರ್ಣ ತುಕರಾಂ ಸ್ಪರ್ಧೆ ಮಾಡಿದ್ದಾರೆ.

ಈ ಮೂರು ಕ್ಷೇತ್ರಗಳ ಪೈಕಿ ಮತಗಟ್ಟೆ ಸಮೀಕ್ಷೆ ಪ್ರಕಾರ ಸಂಡೂರಿನಲ್ಲಿ ಮಾತ್ರ ಕಾಂಗ್ರೆಸ್ ಗೆಲ್ಲಬಹುದು ಎಂದು ವರದಿ ಹೇಳುತ್ತಿವೆ. ಒಂದು ವೇಳೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಅದಕ್ಕೆ ಈ ಮೂರು ಅಂಶಗಳೇ ಕಾರಣವಾಗಲಿದೆ.

ವಕ್ಫ್ ವಿವಾದ
ವಕ್ಫ್ ಸಚಿವ ಜಮೀರ್ ಅಹ್ಮದ್ ಉಪಚುನಾವಣೆ ಹೊಸ್ತಿಲಲ್ಲಿ ವಕ್ಫ್ ಭೂಮಿ ನೋಟಿಫಿಕೇಷನ್ ಮಾಡಲು ಆದೇಶಿಸಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೇ ವಿಚಾರವನ್ನಿಟ್ಟುಕೊಂಡು ರಾಜ್ಯ ಬಿಜೆಪಿ ಹೋರಾಟಕ್ಕಿಳಿದಿದೆ. ರೈತರ ಜಮೀನು ಪಹಣಿಯಲ್ಲೂ ವಕ್ಫ್ ಹೆಸರು ನಮೂದಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಜಮೀನು ವಕ್ಫ್ ಗೆ ಸೇರಿಸಿಬಿಡುತ್ತದೆ ಎಂದು ಬಿಜೆಪಿ ಜನರ ಮುಂದೆ ಹೇಳಿರುವುದು ಕಾಂಗ್ರೆಸ್ ಗೆ ತಿರುಗುಬಾಣವಾಗಲಿದೆ.

ಜಮೀರ್ ಅಹ್ಮದ್ ಕರಿಯಾ ಹೇಳಿಕೆ
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಸೋಲಿಗೆ ಜಮೀರ್ ಅಹ್ಮದ್ ಕರಿಯಾ ಹೇಳಿಕೆಯೇ ಕಾರಣವಾಗಬಹದು ಎನ್ನಲಾಗುತ್ತಿದೆ. ಎಚ್ ಡಿ ಕುಮಾರಸ್ವಾಮಿ ಒಕ್ಕಲಿಗರ ಪ್ರಮುಖ ನಾಯಕ. ಅವರನ್ನು ವರ್ಣ ನಿಂದನೆ ಮಾಡಿದ ಜಮೀರ್ ಕಾಂಗ್ರೆಸ್ ಗೆ ಬೀಳಬೇಕಿದ್ದ ಒಕ್ಕಲಿಗರ ಮತಕ್ಕೇ ಖೆಡ್ಡಾ ತೋಡಿದರು ಎಂಬ ಅಸಮಾಧಾನ ಕಾಂಗ್ರೆಸ್ ನಾಯಕರಲ್ಲಿದೆ.

ಬಿಪಿಎಲ್ ಕಾರ್ಡ್ ಮತ್ತು ಗ್ಯಾರಂಟಿ ವಿವಾದ
ಇತ್ತೀಚೆಗೆ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿರುವುದು ಜನಾಕ್ರೋಶಕ್ಕೆ ಕಾರಣವಾಗಿತ್ತು. ರಾಜ್ಯ ಸರ್ಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಇದ್ದ ಬದ್ದ ಯೋಜನೆಗಳಿಗೆಲ್ಲಾ ಕತ್ತರಿ ಹಾಕುತ್ತಿದೆ ಎಂಬ ಭಾವನೆ ಜನರಲ್ಲಿ ಬರಲಾರಂಭಿಸಿದೆ. ಇದು ಕಾಂಗ್ರೆಸ್ ಗೆ ಈ ಚುನಾವಣೆಯಲ್ಲಿ ಮುಳುವಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments