Webdunia - Bharat's app for daily news and videos

Install App

ಸವದತ್ತಿ ಯಲ್ಲಮ್ಮನ ಮುಂದೆ ಹೀಗೇನಾ ನಡ್ಕೋಳ್ಳೋದು: ಸಿದ್ದರಾಮಯ್ಯನವರಿಗೆ ಆರ್ ಅಶೋಕ್ ಕ್ಲಾಸ್

Sampriya
ಸೋಮವಾರ, 14 ಅಕ್ಟೋಬರ್ 2024 (15:41 IST)
ಬೆಂಗಳೂರು:  ಸವದತ್ತಿ ಯಲ್ಲಮ್ಮ ದೇವಿ ಸನ್ನಿಧಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಡೆದುಕೊಂಡ ರೀತಿಗೆ ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಭಾನುವಾರ ಸಿಎಂ ಸಿದ್ದರಾಮಯ್ಯ ಅವರು ಸವದತ್ತಿ ಯಲಮ್ಮನ ದೇವಿ ದರ್ಶನ ಪಡೆದಿದ್ದರು. ಈ ಸಂದರ್ಭದಲ್ಲಿ ನರೆದಿದ್ದ ಜನಸಮೂಹದಲ್ಲಿದ್ದ ವ್ಯಕ್ತಿಯೊಬ್ಬ ಸಿಎಂ ಪರ ಘೋಷಣೆ ಕೂಗಿದ್ದಾನೆ. ಸಾಹೇಬ್ರೆ,  ಮೂರನೇ ಡಿಸಿ ಬಂದ್ರು ಬೆಳಗಾವಿಯಲ್ಲಿ ಏನೂ ಕೆಲಸ ಆಗಿಲ್ಲ ಸಾಹೇಬ್ರೆ ಎಂದಿದ್ದಾನೆ. ಅದಕ್ಕೆ ಕೋಪಗೊಂಡ ಸಿಎಂ ಸಿದ್ಧರಾಮಯ್ಯ ಅವರು ಏಯ್ ಥೂ, ದೇವಸ್ಥಾನದಲ್ಲೂ ಇದೇ ಕೆಲಸನಾ ಎಂದು ಗರಂ ಆಗಿದ್ದಾರೆ.

ಪ್ರಜೆಗಳ ಬಗ್ಗೆ ಒಬ್ಬ ನಾಡಿನ ಮುಖ್ಯಮಂತ್ರಿ ನಡೆದುಕೊಂಡ ರೀತಿಗೆ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಏಯ್ ಥೂ....

ಇದೇನಾ ಒಬ್ಬ ನಾಡಿನ ಮುಖ್ಯಮಂತ್ರಿ ಪ್ರಜೆಗಳನ್ನ ನಡೆಸಿಕೊಳ್ಳಬೇಕಾದ ರೀತಿ?

ಇದೇನಾ ಬಡವರು, ರೈತರು ಮೇಲೆ ಒಬ್ಬ ಮುಖ್ಯಮಂತ್ರಿಗೆ ಇರಬೇಕಾದ ಸಹನೆ, ಸಹಾನುಭೂತಿ, ಸಂವೇದನೆ?

ಇದೇನಾ ಕಷ್ಟ ಹೇಳಿಕೊಳ್ಳಲು ಬಂದವರಿಗೆ ಒಬ್ಬ ಮುಖ್ಯಮಂತ್ರಿ ಸ್ಪಂದಿಸುವ ಪರಿ?

ತಾಯಿ ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲೇ ಇಂತಹ ದುರ್ನಡತೆ ಪ್ರದರ್ಶನ ಮಾಡಿದ್ದಾರಲ್ಲ, ಆ ತಾಯಿ ಯಲ್ಲಮ್ಮ ಮೆಚ್ಚುತ್ತಾಳಾ?

ಅದು ಹೋಗಲಿ, ಇಂತಹ ದುರ್ನಡತೆಯನ್ನ ಮುಖ್ಯಮಂತ್ರಿಗಳ 'ಆತ್ಮಸಾಕ್ಷಿ'ಯಾದರೂ ಒಪ್ಪುತ್ತಾ?<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments