Select Your Language

Notifications

webdunia
webdunia
webdunia
webdunia

ಕಾಡಾನೆ ದಾಳಿಗೆ ಸಾವನ್ನಪ್ಪಿದ್ದು ಯಾರು?

ಕಾಡಾನೆ
ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಕಾಡಾನೆ ದಾಳಿಗೆ ಕೂಲಿ ಕೆಲಸಕ್ಕೆ ಬಂದಿದ್ದ ರಾಯಚೂರು ಮೂಲದ ವ್ಯಕ್ತಿ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯ ಕಕ್ಕೇರಿ ಗ್ರಾಮದ ಹನುಮಂತಪ್ಪ (50) ಮೃತ ವ್ಯಕ್ತಿಯಾಗಿದ್ದಾರೆ.

ನಾಲೆ ಕಾಂಕ್ರೀಟ್ ಕೆಲಸಕ್ಕೆ ರಾಯಚೂರಿನಿಂದ 8 ಮಂದಿ ಕೂಲಿ ಕಾರ್ಮಿಕರು ಬಂದಿದ್ದರು.

ನಾಲೆ ಕೆಲಸದಲ್ಲಿ ತಲ್ಲೀನರಾಗಿದ್ದಾಗ ಹಠಾತ್ ದಾಳಿ ನಡೆಸಿ ಕಾಲಿನಿಂದ ತುಳಿದಿದೆ ಕಾಡಾನೆ. ಹೆಚ್.ಡಿ.ಕೋಟೆ ತಾಲೂಕಿನ ಹೈರಿಗೆ ಮಾದಾಪುರ ಸಮೀಪದಲ್ಲಿ ಘಟನೆ ನಡೆದಿದೆ.

ರಾತ್ರೋರಾತ್ರಿ ಬೆಳೆ ಹಾನಿಗೆ ಬಂದಿದ್ದ ಕಾಡಾನೆಗಳನ್ನು ರೈತರು ಓಡಿಸುವಾಗ ಸಂಭವಿಸಿದ ಘಟನೆ ಇದಾಗಿದೆ. ಈ ಕುರಿತು ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಮಂಡ್ಯ ಕಾಂಗ್ರೆಸ್ ರೆಬೆಲ್ಸ್ ಸ್ಥಿತಿ ಏನಾಗ್ತಿದೆ?