ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಯಾರು ಅಂತ ಫಿಕ್ಸ್

Krishnaveni K
ಬುಧವಾರ, 25 ಸೆಪ್ಟಂಬರ್ 2024 (08:47 IST)
ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಸರಿ ಎಂದು ತೀರ್ಪು ಬರುತ್ತಿದ್ದಂತೇ ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬಂದಿದೆ. ಅವರ ರಾಜೀನಾಮೆಗೆ ಈಗ ಸ್ವಪಕ್ಷೀಯರಿಂದಲೇ ಒತ್ತಡ ಕೇಳಿಬಂದರೂ ಅಚ್ಚರಿಯಿಲ್ಲ.

ಒಂದು ವೇಳೆ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿ ವಿಚಾರಣೆ ಆರಂಭವಾದರೆ ಅವರು ರಾಜೀನಾಮೆ ನೀಡುವ ಪರಿಸ್ಥಿತಿ ಬಂದರೂ ಅಚ್ಚರಿಯಿಲ್ಲ. ಆ ಅಳುಕು ಸಿದ್ದರಾಮಯ್ಯನವರಿಗಿದೆ. ಈ ಕಾರಣಕ್ಕೇ ಅವರು ಇಂದು ಶಾಸಕಾಂಗ ಪಕ್ಷದ ಸಭೆ ಕರೆದು ಬೆಂಬಲ ನೀಡಲು ಮನವಿ ಮಾಡಲಿದ್ದಾರೆ.

ಈಗಾಗಲೇ ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ಮೇಲೆ ಹಲವರ ಕಣ್ಣಿದೆ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಕೇಳಿಬಂದರೂ ಅಚ್ಚರಿಯಿಲ್ಲ. ಒಂದು ವೇಳೆ ತಾವು ರಾಜೀನಾಮೆ ಕೊಡಬೇಕಾಗಿ ಬಂದರೆ ಸಿದ್ದರಾಮಯ್ಯ ತಮ್ಮ ಆಪ್ತ ಬಳಗದಲ್ಲಿರುವ ಎಂಬಿ ಪಾಟೀಲ್ ಗೆ ಸಿಎಂ ಸ್ಥಾನ ಕೊಡುವಂತೆ ಪಟ್ಟು ಹಿಡಿಯಬಹುದು.

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ಮತ್ತೆ ಸಿದ್ದರಾಮಯ್ಯಗೆ ಆ ಪದವಿಗೇರುವುದು ಕಷ್ಟವಾಗಬಹುದು. ಹೀಗಾಗಿ ಅವರು ಎಂಬಿ ಪಾಟೀಲ್ ರನ್ನೇ ಮುಖ್ಯಮಂತ್ರಿ ಮಾಡಲು ತಮ್ಮಿಂದಾದ ಎಲ್ಲಾ ಪ್ರಯತ್ನ ಮಾಡಬಹುದು. ಇನ್ನೊಂದೆಡೆ ಕಾಂಗ್ರೆಸ್ ಹೈಕಮಾಂಡ್ ಬಳಿ ಸತೀಶ್ ಜಾರಕಿಹೊಳಿ ಹೆಸರೂ ಇದೆ ಎನ್ನಲಾಗುತ್ತಿದೆ. ಇವರಿಬ್ಬರಲ್ಲಿ ಒಬ್ಬರಿಗೆ ಪಟ್ಟ ಸಿಗಬಹುದು ಎಂಬ ಗುಸು ಗುಸು ಕಾಂಗ್ರೆಸ್ ಪಾಳಯದಲ್ಲಿ ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಮುಂದಿನ ಸುದ್ದಿ
Show comments