Webdunia - Bharat's app for daily news and videos

Install App

ರನ್ಯಾ ರಾವ್ ವಿರುದ್ಧ ಸಿಐಡಿ ತನಿಖೆ ಹಿಂಪಡೆದ ಸರ್ಕಾರ: ಅದು ಹಾಗಲ್ಲ, ಹೀಗೆ ಎಂದು ಸ್ಪಷ್ಟನೆ ನೀಡಿದ ಪರಮೇಶ್ವರ್

Krishnaveni K
ಗುರುವಾರ, 13 ಮಾರ್ಚ್ 2025 (12:31 IST)
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ವಿರುದ್ಧ ಸಿಐಡಿ ತನಿಖೆಯನ್ನು ಹಿಂಪಡೆದ ಬಗ್ಗೆ ಗೃಹಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
 

ದುಬೈನಿಂದ ಚಿನ್ನ ಕಳ್ಳಸಾಗಣೆ  ಮಾಡಿದ ಆರೋಪದಲ್ಲಿ ನಟಿ ರನ್ಯಾ ರಾವ್ ರನ್ನು ಬಂಧಿಸಲಾಗಿತ್ತು. ಆಕೆಯ ವಿಚಾರಣೆ ನಡೆಸಿದ ಡಿಆರ್ ಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ವೇಳೆ ಹಲವು ದೊಡ್ಡ ದೊಡ್ಡವರ ಜೊತೆಗೆ ರನ್ಯಾ ಲಿಂಕ್ ಇರುವ ವಿಚಾರ ಬಯಲಾಗುತ್ತಿದೆ.

ಪ್ರಕರಣದ ತನಿಖೆಗೆ ಆದೇಶಿಸಿದ್ದ ರಾಜ್ಯ ಸರ್ಕಾರ ಈಗ ಆದೇಶ ಹಿಂಪಡೆದಿದೆ. ರಾಜಕಾರಣಿಗಳ ಜೊತೆ ರನ್ಯಾ ಲಿಂಕ್ ಸುದ್ದಿಯ ಬೆನ್ನಲ್ಲೇ ರಾಜ್ಯ ಸರ್ಕಾರ ತನಿಖೆ ಹಿಂಪಡೆದಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಇದೀಗ ಗೃಹಸಚಿವ ಜಿ ಪರಮೇಶ್ವರ್ ಸಮಜಾಯಿಷಿ ನೀಡಿದ್ದಾರೆ.

ನೋಡಿ, ನಾನು ತಕ್ಷಣವೇ ಸಿಐಡಿ ತನಿಖೆಗೆ ಆದೇಶ ಮಾಡಿದ್ದೆ. ಪ್ರೋಟೋಕಾಲ್ ಉಲ್ಲಂಘನೆಯಾಗಿದೆಯಾ ಎಂದು ತನಿಖೆಗೆ ಆದೇಶಿಸಿದ್ದೆ. ಆದರೆ ಅಷ್ಟರವರೆಗೆ ಸಿಎಂ ಕಚೇರಿಯಿಂದ ಡಿಪಿಆರ್ ಗೆ ಇನ್ ಸ್ಟ್ರಕ್ಷನ್ ಹೋಗಿತ್ತು. ಡಿಪಿಆರ್ ಒಬ್ಬ ಐಪಿಎಸ್ ಆಫೀಸರ್. ನಮ್ಮ ಆಫೀಸಿಂದ ಮಾಡುವುದು ಬೇಡ, ಡಿಪಿಆರ್ ಮಾಡಲಿ ಎಂದು ಸೂಚನೆಯಿತ್ತು. ಒಂದೇ ವಿಚಾರದ ಬಗ್ಗೆ ಇಬ್ಬರೂ ತನಿಖೆ ಮಾಡುವುದು ಬೇಡ ಎಂದು ಸಿಐಡಿ ತನಿಖೆ ಹಿಂಪಡೆದೆವು ಎಂದು ಪರಮೇಶ್ವರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments