Webdunia - Bharat's app for daily news and videos

Install App

ನಟ ದರ್ಶನ್ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಖಡಕ್ ಆಗಿರುವುದು ಯಾಕೆ ಕಾರಣ ಬಯಲು

Krishnaveni K
ಗುರುವಾರ, 20 ಜೂನ್ 2024 (15:59 IST)
ಬೆಂಗಳೂರು: ದರ್ಶನ್ ಆಂಡ್ ಗ್ಯಾಂಗ್ ರೇಣುಕಾಸ್ವಾಮಿ ಮೇಲೆ ನಡೆಸಿದ ಹಲ್ಲೆ ಮತ್ತು ಹತ್ಯೆ ಪ್ರಕರಣದ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಖಡಕ್ ಆಗಿರುವುದಕ್ಕೆ ಕಾರಣವೇನೆಂದು ಈಗ ಬಯಲಾಗಿದೆ. ಈ ಹಲ್ಲೆಯ ವಿಡಿಯೋ ನೋಡಿ ಸ್ವತಃ ಸಿಎಂ ಶಾಕ್ ಗೊಳಗಾಗಿದ್ದಾರಂತೆ.

ದರ್ಶನ್ ಆಂಡ್ ಗ್ಯಾಂಗ್ ನಡೆಸಿದ ಅನಾಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್ ಮೀಟಿಂಗ್ ನಲ್ಲೂ ಪ್ರಸ್ತಾಪಿಸಿದ್ದಾರಂತೆ. ಅಲ್ಲದೆ, ತಮ್ಮ ಸಂಪುಟದ ಸಚಿವರಿಗೆ ಯಾವುದೇ ಕಾರಣಕ್ಕೂ ಈ ವಿಚಾರದಲ್ಲೂ ಯಾರೂ ದರ್ಶನ್ ಪರ ವಹಿಸಿಕೊಂಡು ಬರಬೇಡಿ ಎಂದು ಖಡಕ್ ಆಗಿ ಸೂಚನೆ ನೀಡಿದ್ದಾರಂತೆ.

ರೇಣುಕಾಸ್ವಾಮಿ ಮೇಲೆ ನಡೆಸಿದ ಹಲ್ಲೆ ವಿಡಿಯೋವನ್ನು ಪೊಲೀಸರು ತೋರಿಸಿದ್ದಾರೆ. ಇಂತಹ ಕ್ರೂರತನವನ್ನು ಎಲ್ಲೂ ನೋಡೇ ಇಲ್ಲ ಎಂದು ಆಘಾತ ವ್ಯಕ್ತಪಡಿಸಿದ್ದಾರಂತೆ. ಹೀಗಾಗಿ ಈ ಪ್ರಕರಣದಲ್ಲಿ ಯಾರೂ ದರ್ಶನ್ ಪರ ವಹಿಸಿಕೊಂಡು ನನ್ನ ಬಳಿ ಬರುವುದು ಬೇಡ. ಕಾನೂನು ಪ್ರಕಾರ ಏನು ಮಾಡಬೇಕೋ ಮಾಡಲಿ ಎಂದಿದ್ದಾರಂತೆ.

ಅಷ್ಟೇ ಅಲ್ಲ, ದರ್ಶನ್ ಪರವಾಗಿ ಅಥವಾ ಪ್ರಕರಣದ ಬಗ್ಗೆ ಬಹಿರಂಗವಾಗಿ ಯಾರೂ ಹೆಚ್ಚು ಮಾತನಾಡುವುದು ಬೇಡ ಎಂದೂ ಇತರೆ ಸಚಿವರಿಗೆ ಸಿಎಂ ಖಡಕ್ ಸೂಚನೆ ಕೊಟ್ಟಿದ್ದಾರಂತೆ. ಪೊಲೀಸರು ತೋರಿಸಿದ ವಿಡಿಯೋ ನೋಡಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ಮೃದು ಧೋರಣೆ ಇಲ್ಲ ಎಂದು ನಿರ್ಧಾರ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments