Webdunia - Bharat's app for daily news and videos

Install App

ನವವಿವಾಹಿತೆ ನೇಣಿಗೆ ಶರಣಾದ್ದದ್ರು ಯಾಕೆ?!

Webdunia
ಭಾನುವಾರ, 12 ಡಿಸೆಂಬರ್ 2021 (10:33 IST)
ಯಾದಗಿರಿ : ಕೇವಲ ಐದಾರು ತಿಂಗಳ ಹಿಂದಷ್ಟೇ ಇಲ್ಲಿನ ಶಾಲಾ ಶಿಕ್ಷಕನೊಂದಿಗೆ ವಿವಾಹವಾಗಿದ್ದ, ಬೆಂಗಳೂರು ಮೂಲದ ಗೃಹಿಣಿಯೊಬ್ಬಳ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆ ಯಾದಗಿರಿಯಲ್ಲಿ ಸೆ.25 ರಂದು ನಡೆದಿತ್ತು. 

ಯಾದಗಿರಿ ನಗರದ ಮಾತೆ ಮಾಣಿಕೇಶ್ವರಿ ಕಾಲೋನಿಯಲ್ಲಿ ವಾಸವಿದ್ದ 25 ವರ್ಷದ ನವವಿವಾಹಿತೆಯೊಬ್ಬಳು ಸೆ.23ರ ಸಂಜೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದಳು. ಕೋಲಾರ ಜಿಲ್ಲೆ ಮುಳಬಾಗಿಲು ಮೂಲದ ಈಕೆಯ ಪತಿ ಯಾದಗಿರಿ ಸಮೀಪದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೆಂದು ಕಾರ್ಯನಿರ್ವಹಿಸುತ್ತಿದ್ದಾರೆ.

ಪತಿಯ ನಡವಳಿಕೆಯ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದ ಆ ಸಂಬಂಧಿಕರು, ತಮ್ಮ ಮಗುವಿಗೆ ಕಿರುಕುಳ ನೀಡಿ ಕೊಲೆ ಮಾಡಲಾಗಿದೆ. ಸರ್ಕಾರಿ ನೌಕರನೆಂಬ ಕಾರಣಕ್ಕೆ ಅದ್ಧೂರಿ ಮದುವೆ ಮಾಡಿದ್ದೆವು, ಮುಗ್ಧ ಜೀವ ಬಲಿಯಾಯ್ತು ಎಂದೆಲ್ಲಾ ಆರೋಪಿಸಿದ್ದರು.

 ಆದರೆ, ಬೆಳಿಗ್ಗೆಯಿಂದ ನಡೆದಿದ್ದ ಈ ಬೆಳವಣಿಗೆಗಳು ಸಂಜೆಯ ವೇಳೆ ಕರಗತೊಡ ಗಿದ್ದವು. ಶಿಕ್ಷಕ ಪತಿ ವಿರುದ್ಧ ದೂರು ನೀಡದಂತೆ, ಇದೊಂದು ಸಹಜ ಆತ್ಮಹತ್ಯೆ ಎಂಬಂತೆ ದೂರು ದಾಖಲಿಸುವಂತೆ ಪಾಲಕರಿಗೆ ಒತ್ತಡ ಹೇರುತ್ತಿದ್ದ ಕೆಲವರು, ಮನವೊಲೈಕೆಗೆ ಯತ್ನಿಸುತ್ತಿರುವುದು ಕಂಡುಬಂದಿತ್ತು.

ಶಿಕ್ಷಕರ ಸಂಘದ ಕೆಲವು ಮುಖಂಡರು, ರಾಜಕೀಯ ಪ್ರಭಾವಿಗಳು ಪಾಲಕರ ಜೊತೆಗೆ ಮಾತು ಕತೆಗೆ ನಿಂತಂತಿತ್ತು. ಸುಮಾರು 10 ರಿಂದ 12 ಲಕ್ಷ ರು.ಗಳ ಹಣದ ಮಾತುಕತೆ ನಡೆದು, ಪತಿಯ ವಿರುದ್ಧ ಮುಂದಿನ ದಿನಗಳಲ್ಲಿ ದೂರು ನೀಡುವುದಿಲ್ಲ ಎಂಬುದಾಗಿ ಬಾಂಡ್ ಪೇಪರಿನಲ್ಲಿ ಬರೆಯಿಸಿಕೊಂಡ ಒಪ್ಪಂದ ನಡೆದು, ಕೊನೆಗೆ ನಗರ ಠಾಣೆಯಲ್ಲಿ ಆತ್ಮಹತ್ಯೆ ದೂರು ದಾಖಲಿಸಲಾಯಿತು ಎಂಬ ಮಾತುಗಳು ಸಾರ್ವಜನಿಕರ ಹಾಗೂ ಶಿಕ್ಷಕರ ವಲಯದಲ್ಲಿ ಕೇಳಿಬಂದಿದ್ದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments