Webdunia - Bharat's app for daily news and videos

Install App

ನಾಳೆಯಿಂದ ಚಳಿಗಾಲದ ಅಧಿವೇಶನ, ಬಿಜೆಪಿಗೆ ಒಗ್ಗಟ್ಟಿನದ್ದೇ ಚಿಂತೆ

Krishnaveni K
ಭಾನುವಾರ, 8 ಡಿಸೆಂಬರ್ 2024 (13:34 IST)
ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭದಲ್ಲಿ ಸರ್ಕಾರವನ್ನು ನಾನಾ ವಿಚಾರಗಳಲ್ಲಿ ತರಾಟೆಗೆ ತೆಗೆದುಕೊಳ್ಳಲು ಮುಂದಾಗಿರುವ ಬಿಜೆಪಿಗೆ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳೇ ಮಗ್ಗುಲ ಮುಳ್ಳಾಗಿದೆ.

ಬಿಜೆಪಿಯಲ್ಲಿ ಈಗ ಬಿವೈ ವಿಜಯೇಂದ್ರ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಬಣವಾಗಿದೆ. ವಕ್ಫ್ ವಿರುದ್ಧ ಹೋರಾಟದಲ್ಲಿ ಇಬ್ಬರ ನಡುವಿನ ಮನಸ್ತಾಪ ಸ್ಪೋಟಗೊಂಡಿದ್ದು, ದೆಹಲಿ ಅಂಗಳಕ್ಕೆ ತಲುಪಿತ್ತು. ಹೈಕಮಾಂಡ್ ಇಬ್ಬರಿಗೂ ಶಿಸ್ತಿನ ಪಾಠ ಹೇಳಿದರೂ ಅಸಮಾಧಾನ ಕಡಿಮೆಯಾಗಿಲ್ಲ.

ಇದೀಗ ನಾಳೆಯಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಪ್ರತಿಪಕ್ಷಬಿಜೆಪಿ ಬಾಣಂತಿಯರ ಸಾವು, ವಕ್ಫ್ ನೋಟಿಫಿಕೇಷನ್ ಸೇರಿದಂತೆ ಹಲವು ವಿಚಾರಗಳನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಹೋರಾಟ ನಡೆಸಲು ಸಿದ್ಧತೆ ನಡೆಸಿದೆ. ಆದರೆ ಪಕ್ಷದ ನಾಯಕರೊಳಗೇ ಒಗ್ಗಟ್ಟಿನ ಕೊರತೆಯಿದ್ದು ಈ ಹೋರಾಟಕ್ಕೆ ಯಶಸ್ಸು ಸಿಗುವುದು ಕಷ್ಟವಾಗಿದೆ.

ಇತ್ತ ಬಿಜೆಪಿಯನ್ನು ಹೆಣೆಯಲು ಕೊವಿಡ್ ಹಗರಣವನ್ನು ಆಡಳಿತಾರೂಢ ಕಾಂಗ್ರೆಸ್ ಅಸ್ತ್ರ ಮಾಡಿಕೊಂಡಿದೆ. ಇದೂ ಬಿಜೆಪಿಗೆ ಕಗ್ಗಂಟಾಗಿದೆ. ಆಡಳಿತ ಪಕ್ಷ ತನ್ನ ಮೇಲೆ ಕೊವಿಡ್ ಹಗರಣದ ಆರೋಪ ಹೊರಿಸಿದರೂ ಇದಕ್ಕೆ ವಿಜಯೇಂದ್ರ ಬಣಕ್ಕೆ ಪ್ರತಿರೋಧ ನೀಡಲು ಯತ್ನಾಳ್ ಬಣದ ಬೆಂಬಲ ಸಿಗುವುದು ಅನುಮಾನವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments