Webdunia - Bharat's app for daily news and videos

Install App

ತೆರಿಗೆ ಕಟ್ಟುವವರಿಗೆ ಯಾಕ್ರೀ ಬಿಪಿಎಲ್ ಕಾರ್ಡ್: ಸಿದ್ದರಾಮಯ್ಯ

Sampriya
ಭಾನುವಾರ, 17 ನವೆಂಬರ್ 2024 (14:01 IST)
Photo Courtesy X
ಬಾಗಲಕೋಟೆ: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ವಾಪಾಸ್ ಪಡೆಯಬಹುದು. ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ಬಿಪಿಎಲ್ ಕಾರ್ಡ್ ಗಳ ರದ್ದಾಗುತ್ತಿವೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, "ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಪತ್ರಕರ್ತರು ಸರಿಯಾಗಿ ತಿಳಿದುಕೊಂಡು ಬರಬೇಕು. ಅನರ್ಹರ ಕಾರ್ಡ್ ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ  ಮಾತ್ರ ನಮ್ಮದಾಗಿದೆ. ಇದಿನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಇನ್ನೂ ಅಂತಿಮ ತೀರ್ಮಾನ ಆಗಿಲ್ಲ. ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಆದಾಯ ತೆರಿಗೆ ಪಾವತಿಸುವವರಿಗೂ, ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ ಎಂದು ಮರು ಪ್ರಶ್ನಿಸಿದ ಸಿಎಂ, ಯಾವ ಕಾರ್ಡ್ ಗಳೂ ರದ್ದಾಗುವುದಿಲ್ಲ. ಅನರ್ಹರಿಂದ ವಾಪಾಸ್ ಪಡೆಯಬಹುದು. ಅರ್ಹರು ವಂಚಿತರಾಗಬಾರದು ಎಂದರು.

40% ಕಮಿಷನ್ ಆರೋಪದಿಂದ ಮುಕ್ತರಾಗಿದ್ದೇವೆ ಎನ್ನುವ ಆರ್.ಅಶೋಕ್ ಮಾತಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಕೊಟ್ಟ ದೂರಿನ ಆಧಾರದಲ್ಲಿ ನಾವು ತನಿಖೆಗೆ ಸೂಚಿಸಿದ್ದೆವು. ಸಾಕ್ಷ್ಯಾಧಾರಗಳ ಕೊರತೆಯಿಂದ ಕೊಲೆ ಆರೋಪಿಗಳು ಬಿಡುಗಡೆ ಆಗುತ್ತಾರೆ. ಹಾಗಂತ ಕೊಲೆಯೇ ಆಗಿಲ್ಲ ಅಂದರೆ ಅದರಲ್ಲಿ ಅರ್ಥ ಇಲ್ಲ. ಕೊಲೆ ನಡೆದಿರುತ್ತದೆ. ಸಾಕ್ಷಿಗಳು ಸಾಕ್ಷ್ಯ ಹೇಳಿರುವುದಿಲ್ಲ ಅಷ್ಟೆ ಅಂದರು.

ಆಪರೇಷನ್ ಕಮಲಕ್ಕಾಗಿ ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ಆಫರ್ ನೀಡಲಾಗಿತ್ತು ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ, " ಬಿಜೆಪಿಯವರು ಆಪರೇಷನ್ ಕಮಲಕ್ಕೆ ಪ್ರಯತ್ನಿಸಿದರು, ವಿಫಲರಾದರು ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments