Webdunia - Bharat's app for daily news and videos

Install App

ಎಂದು ಸದನದಲ್ಲಿ ಯತ್ನಾಳ್‌ ಆರ್ಭಟ

geetha
ಬುಧವಾರ, 28 ಫೆಬ್ರವರಿ 2024 (19:40 IST)
ಬೆಂಗಳೂರು : ಬುಧವಾರ ಸದನದಲ್ಲಿ  ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾತನಾಡಿ, ಪಾಕಿಸ್ತಾನದ ಪರ ಘೋಷಣೆ ಕೂಗಿದರು  ಸದನದಲ್ಲಿ ಆಕ್ಷೇಪಾರ್ಹ ಪದಗಳೊಂದಿಗೆ ಆರ್ಭಟಿಸಿದರು. ಕಾಂಗ್ರೆಸ್‌ ಸದಸ್ಯರ ಆಕ್ಷೇಪದ ನಡುವೆಯೂ ತಮ್ಮ ಪದಬಳಕೆಯನ್ನು ಸಮರ್ಥಿಸಿಕೊಂಡ ಬಸನಗೌಡ ಪಾಟೀಲ್‌ ಯತ್ನಾಳ್‌, ಹೌದು ಈ ದೇಶದ ಅನ್ನ ತಿಂದು ಇಲ್ಲಿಗೆ ದ್ರೋಹ ಬಗೆಯುವವರು ನಿಜಕ್ಕೂ ತಾ*ಗಂಡರು ಎಂದು ತಮ್ಮ ವಾಕ್ಯವನ್ನು ಪುನರುಚ್ಛರಿಸಿದರು.ರಾಜ್ಯಸಭಾ ಚುನಾವಣೆಯ ಬಳಿಕ ಕಾಂಗ್ರೆಸ್‌ ಅಭ್ಯರ್ಥಿ ನಾಸಿರ್‌ ಹುಸೇನ್‌ ರ ವಿಜಯೋತ್ಸವದ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆನ್ನಲಾದ ಪ್ರಕರಣವು ಬುಧವಾರ ಸದನದಲ್ಲಿ ಭಾರೀ ಗದ್ದಲ ನಡೆಯಲು ಕಾರಣವಾಯಿತು. 

ಇದಕ್ಕೂ ಮುನ್ನ ಮಾತನಾಡಿದ ಶಾಸಕ ಸುನಿಲ್‌ ಕುಮಾರ್‌ ಕಾರ್ಕಳ, ಈ ದೇಶ ವಿಭಜನೆಯಾಗಿರುವುದೇ ಧರ್ಮಾಧಾರಿತವಾಗಿದೆ. ಘಟನೆ ನಡೆದೇ ಇಲ್ಲ ಎಂದು ಕೆಲವು ಶಾಸಕರು ಸಮರ್ಥಿಸಿಕೊಳ್ಳುತ್ತಿದ್ದರೆ, ಇನ್ನೂ ಕೆಲವರು ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದಿದ್ದಾರೆ. ಪರೋಕ್ಷವಾಗಿ ಈ ಬಗ್ಗೆ ಕಾಂಗ್ರೆಸ್‌ ಶಾಸಕರಲ್ಲೇ ಗೊಂದಲವಿದ್ದು, ಆರೋಪಿಯನ್ನು ರಕ್ಷಿಸಲು ಯತ್ನಿಸಲಾಗುತ್ತಿದೆ. ಹೀಗಾಗಿ ಪ್ರಕರಣವನ್ನು ಎನ್‌ಐಎ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು. 
 
ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಇದೊಂದು ದೇಶದ ಹಿತರಕ್ಷಣೆಯ ದೃಷ್ಟಿಯಿಂದ ಗಂಭೀರ ಪ್ರಕರಣವಾಗಿದೆ. ಈ ಹಿಂದೆಯೂ ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟದ ಆರೋಪಿ ಸಿಕ್ಕಿಬಿದ್ದಿದ್ದಾಗ ಕಾಂಗ್ರೆಸ್‌ ಇದೇ ರೀತಿ ವರ್ತಿಸಿತ್ತು ಎಂದು ಆರೋಪಿಸಿದರು. 
 
ಬಸನಗೌಡ ಪಾಟೀಲ್‌ ಯತ್ನಾಳ್‌, ಅಂಬೇಡ್ಕರ್‌ ಅವರ ಪುಸ್ತಕದ ಸಾಲುಗಳನ್ನು ಉಲ್ಲೇಖಿಸಿ ಮಾತನಾಡಿ, ಮುಸ್ಲಿಮರು ಯಾವತ್ತೂ ದೇಶದ ಪರವಾಗಿರಲು ಸಾಧ್ಯವಿಲ್ಲ. ಧರ್ಮದ ಪರವಾಗಿ ಇರುತ್ತಾರೆ. ಹೀಗಾಗಿ ಧರ್ಮಾಧಾರಿತವಾಗಿ ದೇಶ ವಿಭಜನೆಯಾದರೆ ಇಲ್ಲಿರುವ ಮುಸ್ಲಿಮರನ್ನು ಪಾಕಿಸ್ತಾನಕ್ಕೆ ಕಳಿಸಿ ಅಲ್ಲಿರುವ ಹಿಂದೂಗಳನ್ನು ಭಾರತಕ್ಕೆ ಕರೆಸಿಕೊಳ್ಳಬೇಕೆಂದು ಬಾಬಾಸಾಹೇಬರೇ ಹೇಳಿದ್ದಾರೆ ಎಂದರು. ಒಟ್ಟಾರೆ, ಬುಧವಾರದ ಅಧಿವೇಶನದ ಕಲಾಪದ ಸಮಯ ಸಂಪೂರ್ಣವಾಗಿ ಪಾಕ್‌ ಪರ ಘೋಷಣೆ ವಿವಾದಕ್ಕೆ ಮೀಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments