Webdunia - Bharat's app for daily news and videos

Install App

ಬಿಜೆಪಿ ಭಿನ್ನಮತ- ಇರಿಸು ಮುರಿಸು ಅನುಭವಿಸಿದ ಯಡಿಯೂರಪ್ಪ

Webdunia
ಗುರುವಾರ, 7 ಡಿಸೆಂಬರ್ 2017 (18:14 IST)
ಔರಾದ್‌ ವಿಧಾನಸಭಾ ಕ್ಷೇತ್ರದಲ್ಲಿ  ಗುರುವಾರ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಿನ್ನಮತ ಮತ್ತೆ ಪ್ರತಿಧ್ವನಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇರಿಸು ಮುರಿಸು ಅನುಭವಿಸಿದರು.
 
ಶಾಸಕ ಪ್ರಭು ಚೌಹಾಣ್‌ ಮತ್ತು ಕಳೆದ ಬಾರಿ  ಕೆಜೆಪಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸೋತಿದ್ದ ಧಾನಾಜಿ ಜಾಧವ್‌ ಅವರೊಳಗಿನ ಭಿನ್ನಮತ ಸ್ಫೋಟಗೊಂಡು ಬಹಿರಂಗವಾಗಿ ವಾಗ್ವಾದ ನಡೆದು ತೀವ್ರ ಉದ್ವಿಗ್ನ ಸ್ಥಿತಿಗೆ ಕಾರಣವಾಯಿತು.
 
ಯಡಿಯೂರಪ್ಪ ಅವರು ವೇದಿಕೆಯಲ್ಲಿದ್ದಾಗಲೇ ಪರಸ್ಪರ ಧಿಕ್ಕಾರಗಳನ್ನು ಕೂಗಲಾಯಿತು. ಧಾನಾಜಿ ಅವರ ನೂರಾರು ಬೆಂಬಲಿಗರು ಆಗಮಿಸಿ  ಶಾಸಕ ಚೌಹಾಣ್‌ ವಿರುದ್ಧ ಧಿಕ್ಕಾರ ಕೂಗಿದರು. ಈ ಸಂದರ್ಭದಲ್ಲಿ ಸಮಾರಂಭ ಗೊಂದಲದ ಗೂಡಾಯಿತು.
 
ಯಡಿಯೂರಪ್ಪ ಅವರು ವೇದಿಕೆಯಲ್ಲಿದ್ದಾಗಲೇ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೆ ಪಕ್ಷದಿಂದಲೆ ಹೊರ ಹಾಕುವುದಾಗಿ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಸಂಸದ ಭಗವಂತ್‌ ಖೂಬಾ ಅವರನ್ನು ಯಡಿಯೂರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments