Publish Date: Sat, 23 Mar 2019 (19:52 IST)
Updated Date: Sat, 23 Mar 2019 (19:53 IST)
ಲೋಕಸಭೆ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಮನೆ ಮುಂದೆಯೇ ಬಿಜೆಪಿ ಮುಖಂಡರ ನಡುವೆ ಮಾರಾಮಾರಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ.
ಸಿ.ಪಿ. ಯೋಗೇಶ್ವರ್ ಮತ್ತು ನಿಶಾ ಯೋಗೇಶ್ವರ್ ಗೆ ಟಿಕೆಟ್ ಬೇಡ, ರಾಮನಗರ ಜಿಲ್ಲಾಧ್ಯಕ್ಷ ರುದ್ರೇಶ್ ಗೆ ಟಿಕೆಟ್ ಕೊಡಿ ಅಥವಾ ಕಾರ್ಯಕರ್ತರಿಗೆ ಕೊಡಿ ಎಂದು ಕೆಲವು ಬಿಜೆಪಿ ಕಾರ್ಯಕರ್ತರಿಂದ ಯಡಿಯೂರಪ್ಪಗೆ ಮನವಿ ಸಲ್ಲಿಸಲಾಯಿತು.
ಯಡಿಯೂರಪ್ಪ ಮನೆಯಿಂದ ಹೊರಬಂದ ವೇಳೆ ಮನವಿ ಮಾಡಿದ ಕಾರ್ಯಕರ್ತರಿಗೆ, ಬಿಎಸ್ವೈ, ನಾನೇನು ಮಾಡಲಪ್ಪ, ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಹೇಳಿ ಮನೆಯಿಂದ ನಿರ್ಗಮಿಸಿದ್ರು.
ಕಾರ್ಯಕರ್ತರಿಗೆ ಕೊಡಿ, ಕ್ಷೇತ್ರದಲ್ಲಿ ಕಾರ್ಯಕರ್ತರು ಕಷ್ಟಪಡ್ತಿದ್ದಾರೆ ಎಂದ ಕಾರ್ಯಕರ್ತರು ಒತ್ತಾಯ ಮಾಡಿದ್ರು. ಅದರ ನಡುವೆಯೇ ಏನು ಹೇಳಬೇಕೋ ನನಗೆ ಗೊತ್ತಾಗುತ್ತಿಲ್ಲ ಎಂದು ಹೇಳಿ ಮನೆಯಿಂದ ತೆರಳಿದ್ರು ಯಡಿಯೂರಪ್ಪ. ಆಗ ಯಡಿಯೂರಪ್ಪ ತೆರಳಿದ ಬಳಿಕ ಧವಳಗಿರಿ ನಿವಾಸದ ಮುಂದೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರಲ್ಲೇ ಕಿತ್ತಾಟ ಆರಂಭಗೊಂಡಿತು. ಕೆಲವರು ಕೈ ಕೈಮಿಲಾಯಿಸಿದ ಘಟನೆಯೂ ನಡೆಯಿತು.
ಯೋಗೇಶ್ವರ್ ಬೆಂಬಲಿಗರು ಮತ್ತು ರುದ್ರೇಶ್ ಬೆಂಬಲಿಗರ ನಡುವೆ ಮಾತಿನ ಚಕಮಕಿ, ತಳ್ಳಾಟ ನಡಯಿತು.