Webdunia - Bharat's app for daily news and videos

Install App

ಎತ್ತಿನ ಹೊಳೆ ಪ್ರಾಜೆಕ್ಟ್ ಗೆ ಯಾವುದೇ ಪರಿಣಾಮವಾಗಲ್ಲ

Webdunia
ಮಂಗಳವಾರ, 8 ಮಾರ್ಚ್ 2022 (16:07 IST)
ತುಮಕೂರು ಜಿಲ್ಲೆಯ ಬೈರಗೊಂಡ್ಲು ಜಲಾಶಯಕ್ಕೆ ಭೂ ಸ್ವಾಧೀನ ಪ್ರಕ್ರಿಯೆಯಿಂದ ಸಮಸ್ಯೆಗಳು ಸೃಷ್ಟಿಯಾಗಿದ್ದು, ಇದರಿಂದಾಗಿ ರಾಜ್ಯ ಸರ್ಕಾರ ಜಲಾಶಯದ ಸಾಮರ್ಥ್ಯವನ್ನು 10 ಟಿಎಂಸಿಯಿಂದ 2 ಟಿಎಂಸಿಗೆ ತಗ್ಗಿಸಲು ನಿರ್ಧರಿಸಿದೆ.ಬೈರಗೊಂಡ್ಲು ಜಲಾಶಯ ಎತ್ತಿನಹೊಳೆ ಯೋಜನೆಯ ಭಾಗವಾಗಿದೆ.
 
ಇದರಿಂದ ಯೋಜನೆಗೆ ಯಾವುದೇ ಧಕ್ಕೆಯುಂಟಾಗುವುದಿಲ್ಲ, ಈ ಹಿಂದೆ ಯೋಜಿಸಿದಂತೆ ಎಲ್ಲಾ ಪ್ರದೇಶಗಳಿಗೆ ನೀರುಣಿಸಲು ಜಲಾಶಯದ ನೀರು ಬಳಕೆ ಮಾಡಬಹುದು ಎಂದರು.
 
ನಿನ್ನೆ ವಿಧಾನ ಪರಿಷತ್ ಕಲಾಪ ವೇಳೆ ವಿರೋಧ ಪಕ್ಷದ ನಾಯಕರು ಬೈರಗೊಂಡ್ಲು ಜಲಾಶಯದ ಸಾಮರ್ಥ್ಯವನ್ನು ತಗ್ಗಿಸಿದರೆ ಕೋಲಾರ ಜಿಲ್ಲೆಯಲ್ಲಿ ಹಲವು ಪ್ರದೇಶಗಳಿಗೆ ನೀರು ಸಿಗುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದರು. ಅದಕ್ಕೆ ಉತ್ತರಿಸಿದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಚುನಾವಣಾ ಪ್ರತಿನಿಧಿಗಳು ಯೋಜನೆಯನ್ನು ವಿಳಂಬ ಮಾಡದೆ ಪ್ರಾರಂಭ ಮಾಡಬೇಕೆಂದು ಹೇಳುತ್ತಿದ್ದಾರೆ. ಅಲ್ಲದೆ 2 ಟಿಎಂಸಿ ಸಾಮರ್ಥ್ಯದ ಜಲಾಶಯವನ್ನು ಪರಿಷ್ಕೃತ ಅಂದಾಜು ವೆಚ್ಚ 23,251 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಬದಲಿ ಪ್ರಸ್ತಾವನೆ ತಯಾರು ಮಾಡಿದ್ದಾರೆ. ಹಣಕಾಸು ಇಲಾಖೆ ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ ಎಂದು ವಿವರಿಸಿದರು.
ಜಲಾಶಯ ನಿರ್ಮಾಣಕ್ಕೆ ಇರುವ ಸವಾಲುಗಳನ್ನು ಕೂಡ ವಿವರಿಸಿದ ಅವರು, ಜಲಾಶಯ ನಿರ್ಮಾಣಕ್ಕೆ 12,857 ಎಕರೆ ಭೂಮಿ ಬೇಕಾಗಿದ್ದು ಅವುಗಳಲ್ಲಿ 11,747 ಎಕರೆ ರೈತರಿಂದ, 118 ಎಕರೆ ಅರಣ್ಯ ಭೂಮಿ ಮತ್ತು 992 ಎಕರೆ ಸರ್ಕಾರಿ ಭೂಮಿ ಬೇಕಾಗಿದೆ. ರೈತರಿಂದ ಪಡೆಯಬೇಕಾದ ಜಮೀನುಗಳು ಕೊರಟಗೆರೆ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕುಗಳಲ್ಲಿ ಇವೆ. ಈ ಎರಡೂ ಗ್ರಾಮಗಳಲ್ಲಿ ಜಮೀನುಗಳ ಸರ್ಕಾರ ನಿಗದಿಪಡಿಸಿದ ಬೆಲೆ ಭಿನ್ನವಾಗಿವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bengaluru viral video:ಬೆಂಗಳೂರಿನ ಹೋಟೆಲ್ ನ ಎಲ್ ಇಡಿ ಸ್ಕ್ರೀನ್ ಮೇಲೆಯೇ ಕನ್ನಡಿಗರ ಬೈಗುಳ

Shahbaz Sharif: ರಾತ್ರಿ 2.30 ಕ್ಕೆ ಕಾಲ್ ಬಂತು: ಸತ್ಯ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಷರೀಫ್

Bengaluru Mangaluru Rail: ಬೆಂಗಳೂರು, ಮಂಗಳೂರು ರೈಲ್ವೇ ಪ್ರಯಾಣಿಕರ ಗಮನಕ್ಕೆ: ರೈಲುಗಳು ಕ್ಯಾನ್ಸಲ್

Boycott Turkey: ಬೆಂಗಳೂರಿನಲ್ಲಿ ಟರ್ಕಿ ಮಾರ್ಬಲ್ ಗೂ ನಿಷೇಧ

ಮುಂದಿನ ಸುದ್ದಿ
Show comments