Webdunia - Bharat's app for daily news and videos

Install App

ಯುವಕರೇ ವೀಲ್ಹಿಂಗ್ ಮಾಡುವ ಮುನ್ನ ಎಚ್ಚರ..! ವೀಲ್ಹಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

Webdunia
ಬುಧವಾರ, 9 ಆಗಸ್ಟ್ 2023 (08:58 IST)
ಚಿಕ್ಕಬಳ್ಳಾಪುರ : ಸಿನಿಮೀಯ ಶೈಲಿಯಲ್ಲಿ ಬೈಕ್ ವೀಲ್ಹಿಂಗ್ ಮಾಡುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ಪರಿಣಾಮ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವುಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ. ಇದೀಗ ಆತ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಅಪ್ರೋಜ್ ಪಾಷಾ (16) ಮೃತ ವಿದ್ಯಾರ್ಥಿ.
 
ಮೈಲಾಂಡಹಳ್ಳಿ ಗ್ರಾಮದ 18 ವರ್ಷದ ತಾಜ್ ಉಲ್ಲಾ ಷರೀಪ್ ಹಾಗೂ ಅಪ್ರೋಜ್ ಪಾಷಾ ಇತ್ತೀಚೆಗೆ ಕುರುಟಹಳ್ಳಿ ಗ್ರಾಮದ ರಸ್ತೆಯಲ್ಲಿ ಬೈಕ್ ವೀಲ್ಹಿಂಗ್ ಮಾಡಿದ್ದರು. ಬೈಕ್ ಚಾಲನೆ ಮಾಡುತ್ತಿದ್ದ ತಾಜ್ ಉಲ್ಲಾ ಷರೀಪ್ ಪ್ರಾಣದ ಹಂಗು ದೊರೆದು ಬೇಕಾ ಬಿಟ್ಟಿ ಬೈಕ್ ವೀಲ್ಹಿಂಗ್ ಮಾಡುತ್ತಿದ್ದರೆ, ಹಿಂಬದಿ ಸವಾರನಾಗಿದ್ದ ಅಪ್ರೋಜ್ ಪಾಷಾ ಕೈಯಲ್ಲಿ ಮಾರುದ್ದ ಲಾಂಗ್ ಹಿಡಿದು ಅದನ್ನು ರಸ್ತೆಗೆ ಸವರುತ್ತಾ ಕೇಕೆ ಹಾಕುತ್ತಾ ಸಂಚರಿಸಿದ್ದರು.

ತಾಜ್ ಉಲ್ಲಾ ಷರೀಪ್ ಅತಿವೇಗವಾಗಿ ಅಡ್ಡಾದಿಡ್ಡಿಯಾಗಿ ಅಜಾಗುರುಕತೆಯಿಂದ ಬೈಕ್ ವೀಲ್ಹಿಂಗ್ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಕೆ.ಎಸ್.ತಮ್ಮರೆಡ್ಡಿಯವರ ಜಮೀನನ ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದಿದ್ದನು. ಡಿಕ್ಕಿ ರಭಸಕ್ಕೆ ಬೈಕ್ ಸವಾರ ತಾಜ್ ಉಲ್ಲಾ ಷರೀಪ್ ಪ್ರಾಣಾಪಾಯದಿಂದ ಪಾರಾಗಿದ್ದನು. ಆದರೆ ಗಂಭೀರ ಗಾಯಗೊಂಡಿದ್ದ ಅಪ್ರೋಜ್ ಪಾಷಾನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕೀತ್ಸೆ ಫಲಕಾರಿಯಾಗದೆ ನಿನ್ನೆ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments