Webdunia - Bharat's app for daily news and videos

Install App

ತಪ್ಪು ಮಾಡಿದ್ದಕ್ಕೇ ದರ್ಶನ್ ಜೈಲಿಗೆ ಹೋಗಿದ್ದು: ಜಮೀರ್ ಅಹ್ಮದ್ ಬದಲಾದ ವರಸೆ

Krishnaveni K
ಮಂಗಳವಾರ, 3 ಸೆಪ್ಟಂಬರ್ 2024 (15:24 IST)
Photo Credit: Facebook
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು ಸಚಿವ ಜಮೀರ್ ಅಹ್ಮದ್ ನಡುವಿನ ಗೆಳೆತನ ಎಲ್ಲರಿಗೂ ಗೊತ್ತೇ ಇದೆ. ಆದರೆ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ ಎನ್ನಲಾಗಿದ್ದು, ಅದಾದ ಬಳಿಕ ಜಮೀರ್ ವರಸೆಯೇ ಬದಲಾಗಿದೆಯಾ ಎಂಬ ಅನುಮಾನ ಮೂಡಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಇದ್ದಾಗ ಅವರಿಗೆ ರಾಜಾತಿಥ್ಯ ನೀಡಲು ಪ್ರಭಾವಿ ಸಚಿವರೊಬ್ಬರೇ ಅನುಕೂಲ ಮಾಡಿಕೊಟ್ಟಿದ್ದರು ಎಂಬ ಮಾತುಗಳಿತ್ತು. ಆಗ ಎಲ್ಲರ ಗಮನ ಜಮೀರ್ ಮೇಲೆಯೇ ಹರಿದಿತ್ತು. ಇದಕ್ಕೆ ಮೊದಲು ದರ್ಶನ್ ಬಂಧನವಾದಾಗ ಪೊಲೀಸರ ಮೇಲೆ ಒತ್ತಡ ಹಾಕಲಾಗುತ್ತಿದೆ ಎಂಬ ಆರೋಪ ಬಂದಾಗಲೂ ಜಮೀರ್ ಮೇಲೆಯೇ ಎಲ್ಲರ ಅನುಮಾನವಿತ್ತು.

ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ  ಖಡಕ್ ವಾರ್ನಿಂಗ್ ಕೊಟ್ಟಿದ್ದರು ಎನ್ನಲಾಗಿದೆ. ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ತಲೆ ಹಾಕಲು ಹೋಗಬೇಡಿ. ಇದರಿಂದ ನಿಮಗೇ ತೊಂದರೆಯಾಗಬಹುದು ಎಂದಿದ್ದರು. ಹೀಗಾಗಿ ಇಂದು ಮಾಧ್ಯಮಗಳು ದರ್ಶನ್ ಪ್ರಕರಣದ ಬಗ್ಗೆ ಕೇಳಿದಾಗ ಜಮೀರ್ ವರಸೆ ಬದಲಿಸಿದ್ದಾರೆ.

‘ನನ್ನ ದರ್ಶನ್ ನಡುವೆ ಗೆಳೆತನವಿರುವುದು ನಿಜ. ಹಾಗಂತ ಈ ವಿಚಾರದಲ್ಲಿ ನಾನು ತಲೆ ಹಾಕಲು ಹೋಗಿಲ್ಲ’ ಎಂದಿದ್ದಾರೆ. ಇನ್ನು, ದರ್ಶನ್ ತಪ್ಪು ಮಾಡಿದ್ದಾರೆ ಎನಿಸುತ್ತದೆಯೇ ಎಂದು ಕೇಳಿದಾಗ ‘ಹೌದು, ತಪ್ಪು ಮಾಡಿದ್ದಕ್ಕೇ ಜೈಲಿನಲ್ಲಿದ್ದಾರೆ’ ಎಂದು ಎಲ್ಲರ ಅಚ್ಚರಿಗೆ ಕಾರಣವಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments