Webdunia - Bharat's app for daily news and videos

Install App

ನಂಗೂ ಸಿಎಂ ಆಗಬೇಕೆಂಬ ಆಸೆ ಇರಲ್ವಾ: ಸಿಎಂ ಕುರ್ಚಿ ಜಮೀರ್ ಅಹ್ಮದ್ ಕಣ್ಣು

Krishnaveni K
ಸೋಮವಾರ, 2 ಸೆಪ್ಟಂಬರ್ 2024 (14:36 IST)
ಬೆಂಗಳೂರು: ಸಿಎಂ ಆಗಬೇಕೆಂಬ ಆಸೆ ಯಾರಿಗಿರಲ್ಲ ಹೇಳಿ? ನನಗೂ ಇದೆ ಎನ್ನುವ ಮೂಲಕ ಸಚಿವ ಜಮೀರ್ ಅಹ್ಮದ್ ಖಾನ್ ಸಿಎಂ ಕುರ್ಚಿಗೇ ಟವೆಲ್ ಹಾಕಿದ್ದಾರೆ.

ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಜಮೀರ್ ಅಹ್ಮದ್ ತಮಗೂ ಮುಂದೆ ಸಿಎಂ ಆಗಬೇಕೆಂಬ ಆಸೆಯಿದೆ ಎಂದಿದ್ದಾರೆ. ರಾಜ್ಯ ಸರ್ಕಾರದಲ್ಲಿ ಸಿಎಂ ಬದಲಾವಣೆ ವಿಚಾರ, ಕೆಲವು ಹಿರಿಯ ನಾಯಕರು ಸಿಎಂ ಆಗಬೇಕೆಂದು ಬಯಸುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು ನನಗೂ ಆಸೆಯಿದೆ ಎಂದಿದ್ದಾರೆ.

ನಿನ್ನೆಯಷ್ಟೇ ಕಾಂಗ್ರೆಸ್ ಹಿರಿಯ ನಾಯಕ ಆರ್ ವಿ ದೇಶಪಾಂಡೆ ನನಗೂ ಸಿಎಂ ಆಗಬೇಕೆಂಬ ಆಸೆಯಿದೆ ಎಂದಿದ್ದರು. ಇದರ ಬಗ್ಗೆ ಪ್ರತಿಕ್ರಿಯಿಸಿದ ಜಮೀರ್ ಅಹ್ಮದ್ ‘ಅವರು ಹಿರಿಯ ನಾಯಕರು. ಐದೋ ಆರೋ ಬಾರಿ ಶಾಸಕರಾಗಿ ಗೆದ್ದು ಬಂದವರು. ನನಗೆ ಆಸೆಯಿದೆ ಎಂದಿದ್ದಾರೆ. ಸಿಎಂ ಆಗಬೇಕೆಂದು ಯಾರಿಗೆ ಆಸೆ ಇರಲ್ಲ ಹೇಳಿ? ನನಗೂ ಇಲ್ವಾ? ನಿಮಗೂ ಅವಕಾಶ ಕೊಟ್ಟರೆ ಸಿಎಂ ಆಗಬೇಕೆಂಬ ಆಸೆಯಿರಲ್ವಾ? ಅದೇ ರೀತಿ ಅವರೂ ಆಸೆ ಹೇಳಿಕೊಂಡಿದ್ದಾರೆ’ ಎಂದಿದ್ದಾರೆ.

ಇನ್ನು, ಸಿಎಂ ಬದಲಾವಣೆ ಬಗ್ಗೆ ಕೇಳಿದಾಗ ಗರಂ ಆಗಿ ಉತ್ತರಿಸಿದ ಅವರು ಯಾರು ಯಾರೋ ಹೇಳಿದರೆ ಸಿಎಂ ಬದಲಾವಣೆಯಾಗಲಲ್ಲ. ಸಿಎಂ ಬದಲಾವಣೆಯಾಗುತ್ತದೆ ಎಂದು ರಾಹುಲ್ ಗಾಂಧಿಯವರು ಹೇಳಿದ್ರಾ? ಹಾಗಿದ್ದರೆ ಮಾತ್ರ ಆಗುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments