Webdunia - Bharat's app for daily news and videos

Install App

ತುರ್ತು ಸಂದರ್ಭಗಳಲ್ಲಿ ಮಾತ್ರ ಸಿಎಂ ಗೆ ಝೀರೋ ಟ್ರಾಫಿಕ್ ವ್ಯವಸ್ಥೆ: ಜಂಟಿ ಸಂಚಾರ ಆಯುಕ್ತರ ಆದೇಶ

Webdunia
ಶನಿವಾರ, 14 ಆಗಸ್ಟ್ 2021 (21:14 IST)
ಬೆಂಗಳೂರು: ಝೀರೋ ಟ್ರಾಫಿಕ್ ನೀಡದಂತೆ ಸಿ.ಎಂ ಬೊಮ್ಮಾಯಿ ಪೊಲೀಸ್ ಇಲಾಖೆಗೆ ಈ ಹಿಂದೆ ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ  ತುರ್ತು ಹಾಗೂ ಅನಿವಾರ್ಯ ಸಂದರ್ಭಗಳಲ್ಲಿದ್ದಲ್ಲಿ ಮಾತ್ರ ಝೀರೋ ಟ್ರಾಫಿಕ್ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಿವಂತೆ ಜಂಟಿ ಸಂಚಾರ ಪೊಲೀಸ್ ಆಯುಕ್ತರಾದ ರವಿಕಾಂತೇಗೌಡ ನಗರದ ಟ್ರಾಫಿಕ್ ಪೊಲೀಸರಿಗೆ ಸೂಚಿಸಿ ಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾವು ಬೆಂಗಳೂರು ನಗರದಲ್ಲಿ ಸಂಚರಿಸುವ ವೇಳೆ ತಮ್ಮ ವಾಹನಕ್ಕೆ ಝೀರೋ  ಟ್ರಾಫಿಕ್ ನೀಡಬಾರದು. ಇದರಿಂದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗುತ್ತದೆ, ಕೆಲವು ವೇಳೆ ತುರ್ತು ವಾಹನಗಳಾದ ಆಂಬ್ಯುಲೆನ್ಸ್, ಅಗ್ನಿಶಾಮಕದಳ ವಾಹನಗಳು ಸಿಲುಕುವುದರಿಂದ ತಮಗೆ  ನೋವು ಮತ್ತು ಮುಜುಗರ ಉಂಟು ಮಾಡುತ್ತದೆ. ಈ ನಿಟ್ಟಿನಲ್ಲಿ  ಝೀರೋ ಟ್ರಾಫಿಕ್ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಪೊಲೀಸ್ ಇಲಾಖೆಗೆ  ಸೂಚನೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಎಲ್ಲಾ ಸಂಚಾರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಮುಖ್ಯಮಂತ್ರಿಗಳು ಸಂಚರಿಸುವ ವೇಳೆಯಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆಯನ್ನು ರದ್ದುಗೊಳಿಸಿ ಆದೇಶಿಸಲಾಗಿದ್ದು, ಒಂದು ಜಂಕ್ಷನ್‌ನಿಂದ ಮತ್ತೊಂದು ಜಂಕ್ಷನ್‌ಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಮಾತ್ರ ಮುಖ್ಯಮಂತ್ರಿಗಳಿಗೆ ನೀಡುವಂತೆ ನಿರ್ದೇಶಿಸಲಾಗಿದೆ. ತುರ್ತು ಹಾಗೂ ಅನಿವಾರ್ಯ ಸಂದರ್ಭಗಳಲ್ಲಿದ್ದಲ್ಲಿ ಮಾತ್ರ ಝೀರೋ  ಟ್ರಾಫಿಕ್ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಿಕೊಡುವಂತೆ ಸೂಚಿಸಲಾಗಿದೆ ಕಲ್ಪಿಸುವಂತೆ ಸೂಚಿಸಲಾಗಿದೆ ಎಂದು ಜಂಟಿ ಸಂಚಾರ ಆಯುಕ್ತ ಡಾ. ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments