Webdunia - Bharat's app for daily news and videos

Install App

ಒಲಿಂಪಿಕ್ಸ್‌ಗೆ ತೆರೆ ಬೀಳುತ್ತಿದ್ದರೂ ಪ್ರಕಟವಾಗದ ವಿನೇಶ್ ತೀರ್ಪು, ಕುಸ್ತಿಪಟುವಿನ ಮುಂದಿನ ನಡೆ ಏನಿರುತ್ತೆ

Sampriya
ಭಾನುವಾರ, 11 ಆಗಸ್ಟ್ 2024 (11:04 IST)
ಬೆಂಗಳೂರು: 2024 ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆಜಿ ಕುಸ್ತಿ ವಿಭಾಗದಿಂದ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ಅವರು ಸಲ್ಲಿಸಿರುವ ಮೇಲ್ಮನವಿ ಮೇಲಿನ ತೀರ್ಪನ್ನು ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ ಆಗಸ್ಟ್‌ 13ಕ್ಕೆ ಮುಂದೂಡಿದೆ. ಈವಿನೇಶ್ ಅವರನ್ನು ತಿಳಿಯಲು ಆಗಸ್ಟ್ 13 ರವರೆಗೆ ಕಾಯಬೇಕಾಗಿದೆ.

ನಿಗದಿಗಿಂತ ತೂಕಗಿಂತ 100 ಗ್ರಾಂ ಅಧಿಕ ತೂಕ ಹೊಂದಿದ್ದಾರೆ ಎಂದು ಕೊನೆ ಕ್ಷಣದಲ್ಲಿ ವಿನೇಶ್‌ ಅವರನ್ನು ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ. ವಿಭಾಗದ ಫೈನಲ್‌ನಿಂದ ಅನರ್ಹಗೊಳಿಸಲಾಗಿತ್ತು.

ಕ್ರೀಡಾಕೂಟದ ಸಂದರ್ಭದಲ್ಲಿ ವಿವಾದ ಪರಿಹಾರಕ್ಕಾಗಿ ವಿಶೇಷವಾಗಿ ಸ್ಥಾಪಿಸಲಾಗಿರುವ ಸಿಎಎಸ್‌ನ ತಾತ್ಕಾಲಿಕ ವಿಭಾಗಕ್ಕೆ (ಅಡ್‌–ಹಾಕ್‌), ತಮ್ಮ ವಿರುದ್ಧದ ಕ್ರಮ ಪ್ರಶಸ್ನಿ ವಿನೇಶ್‌ ಶುಕ್ರವಾರ ಮೇಲ್ಮನವಿ ಸಲ್ಲಿಸಿದ್ದರು.

"ಸಿಎಎಸ್‌ನ ತಾತ್ಕಾಲಿಕ ವಿಭಾಗವು ವಿನೇಶ್ ಫೋಗಾಟ್ ವರ್ಸಸ್ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಮತ್ತು ಇಂಟರ್ನ್ಯಾಷನಲ್ ಒಲಿಂಪಿಕ್ ಕಮಿಟಿ ವಿಷಯದಲ್ಲಿ ಏಕೈಕ ಮಧ್ಯಸ್ಥಗಾರ ಗೌರವಾನ್ವಿತ ಡಾ. ಅನ್ನಾಬೆಲ್ಲೆ ಬೆನೆಟ್‌ಗೆ ಆಗಸ್ಟ್ 13, 2024 ರಂದು ಸಂಜೆ 6-00 ಗಂಟೆಯವರೆಗೆ ನಿರ್ಧಾರವನ್ನು ನೀಡಲು ಸಮಯವನ್ನು ವಿಸ್ತರಿಸಿದೆ.

ಶನಿವಾರ ಮಧ್ಯಾಹ್ನ, ಆಗಸ್ಟ್ 10 ರಂದು ರಾತ್ರಿ 9:30 IST ಕ್ಕೆ ತೀರ್ಪು ನೀಡಲಾಗುವುದು ಎಂದು CAS ಘೋಷಿಸಿತು. ಆದರೆ, ನಿರ್ಧಾರವನ್ನು ಮುಂದೂಡಲಾಯಿತು. ತೀರ್ಪನ್ನು ಆಗಸ್ಟ್ 13 ಕ್ಕೆ ಮುಂದೂಡಲಾಗಿದೆ ಎಂದು ನಂತರ ಬಹಿರಂಗಪಡಿಸಲಾಯಿತು, ಆದರೆ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಸಹಾಯ ಮಾಡಲು ಸಿಎಎಸ್ ಹೆಚ್ಚುವರಿ ದಾಖಲೆಗಳನ್ನು ಕೋರಿದೆ ಎಂದು ಈಗ ಬಹಿರಂಗವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments