ಇಮ್ರಾನ್‌ಖಾನ್‌ರನ್ನು ಹಾಡಿ ಹೊಗಳಿ ಪೇಚಿಗೆ ಸಿಲುಕಿದ್ಯಾರು?

Webdunia
ಶುಕ್ರವಾರ, 12 ಏಪ್ರಿಲ್ 2019 (12:25 IST)
2019 ರ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ದೋಸ್ತಿ ಅಭ್ಯರ್ಥಿಯ ಸಮಾವೇಶವೊಂದರಲ್ಲಿ ಶಾಸಕರೊಬ್ಬರು ಇಮ್ರನ್ ಖಾನ್ ರನ್ನು ಹಾಡಿ ಹೊಗಳಿ ಪೇಚಿಗೆ ಸಿಲುಕಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ದೋಸ್ತಿ ಪಕ್ಷಗಳ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಪರ ಶೃಂಗೇರಿ ಶಾಸಕ ಟಿ.ಡಿ‌. ರಾಜೇಗೌಡ ಭರ್ಜರಿ ಪ್ರಚಾರ ನಡೆಸಿದ್ರು.

ಇಂದು ಎನ್.ಆರ್.ಪುರದ ಮೆಣಸೂರಿನಲ್ಲಿ ಸಮಾವೇಶ ನಡೆಸಿದ್ದ ಟಿ.ಡಿ.ರಾಜೇಗೌಡ, ಪಾಕ್ ಪ್ರಧಾನಿ ಇಮ್ರಾನ್‌ ಖಾನ್‌ರನ್ನು ಹಾಡಿ ಹೊಗಳಿ ಪೇಚಿಗೆ ಸಿಲುಕಿದ್ದಾರೆ.

ಇಮ್ರಾನ್‌ಖಾನ್ ಪಾಕಿಸ್ತಾನದ ಪ್ರಧಾನಮಂತ್ರಿ. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಸರ್ಜಿಕಲ್ ಸ್ಟ್ರೈಕ್ ಹೆಸರಿನಲ್ಲಿ ಮೋದಿ ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ನಮ್ಮ ಯುದ್ಧ ವಿಮಾನಗಳು ಪಾಕಿಸ್ತಾನದ ಗಡಿಗೆ ಹೋಗಿತ್ತು. ಅವರ ಯುದ್ಧ ವಿಮಾನಗಳು ಸೇರಿದಂತೆ ಅಲ್ಲಿನ ಸೈನ್ಯವನ್ನು ಹೊಡೆದುರುಳಿಸಿದ್ದು ನಿಜ.

ಆದಾದ ಬಳಿಕ ನಮ್ಮ ದೇಶದ ವಿಂಗ್ ಕಮಾಂಡರ್ ಅಭಿನಂದನ್‌ರನ್ನು ವಶದಲ್ಲಿಟ್ಟುಕೊಂಡಿದ್ದು ನಿಜ. ವಿಂಗ್ ಕಮಾಂಡರ್ ಅಭಿನಂದನ್ ಬಂಧನವಾದ ಬಳಿಕ ಮೋದಿ ಪಾಕಿಸ್ಥಾನಕ್ಕೆ ಬೆದರಿಕೆ ಹಾಕಿದ್ರು. ಆದ್ರೆ ಪಾಕಿಸ್ಥಾನದ ಪ್ರಧಾನಿ ಇಮ್ರಾನ್‌ಖಾನ್ ಸಜ್ಜನ ವ್ಯಕ್ತಿ. ಅವರು ನಮ್ಮ ದೇಶವನ್ನು ನೋಡಿದ್ದಾರೆ.

ನಮ್ಮ ಸೈನಿಕರನ್ನು ನೋಡಿ ಇಮ್ರಾನ್‌ಖಾನ್, ವಿಂಗ್ ಕಮಾಂಡರ್ ಅಭಿನಂದನ್‌ರನ್ನು ಬಿಡುಗಡೆಗೊಳಿಸಿದ್ರು.
ಅದು‌ ಮೋದಿ ಅವರ ಬೆದರಿಕೆಗೆ ಅಲ್ಲಾ ಎಂದು ಸಮಾವೇಶದಲ್ಲಿ ಭಾಷಣ ಮಾಡಿದ ಟಿ.ಡಿ.ರಾಜೇಗೌಡ ಹೇಳಿಕೆ ವೈರಲ್ ಆಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments