Webdunia - Bharat's app for daily news and videos

Install App

ಎಎಪಿ ಪಕ್ಷವನ್ನು ಗೆಲ್ಲಿಸುವುದು ನಮ್ಮ ಕೆಲಸವಲ್ಲ: ಆಪ್‌ ಸೋಲಿನ ಟೀಕೆಗೆ ಕಾಂಗ್ರೆಸ್‌ ತೀಷ್ಣ ಪ್ರತಿಕ್ರಿಯೆ

Sampriya
ಶನಿವಾರ, 8 ಫೆಬ್ರವರಿ 2025 (14:21 IST)
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತರೂಢ ಆಮ್ ಆದ್ಮಿ ಪಕ್ಷದ ಸೋಲಿಗೆ ನಮ್ಮ ಪಕ್ಷ ಜವಾಬ್ದಾರಿಯಲ್ಲ. ಆ ಪಕ್ಷವನ್ನು ಗೆಲ್ಲಿಸುವುದು ನಮ್ಮ ಕೆಲಸವಲ್ಲ ಎಂದು ಕಾಂಗ್ರೆಸ್ ಹೇಳಿದೆ.

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತದತ್ತ ಸಾಗಿದ್ದು, ಎಎಪಿ ಪಕ್ಷ ಸೋಲಿನತ್ತ ಮುಖ ಮಾಡಿದೆ. ಒಟ್ಟು 70ಕ್ಷೇತ್ರಗಳ ಪೈಕಿ ಬಿಜೆಪಿ 47 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಎಎಪಿ 23 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ದೆಹಲಿ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೋಲು ಕಂಡಿದ್ದಾರೆ.

ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷವಾಗಿರುವ ಎಎಪಿ ರಾಷ್ಟ್ರ ರಾಜಧಾನಿಯಲ್ಲಿ ಸತತ ಮೂರನೇ ಅವಧಿಗೆ ಗೆಲ್ಲುವ ಪ್ರಯತ್ನದಲ್ಲಿ ವಿಫಲವಾಗಿವೆ. ದೆಹಲಿ ಚುನಾವಣಾ ಫಲಿತಾಂಶ ಬೆನ್ನಲ್ಲೇ ಎಎಪಿ ಸೋಲಿಗೆ ಕಾಂಗ್ರೆಸ್ ಕಾರಣ ಎಂಬ ಟೀಕೆಗಳು ಉದ್ಭವಾಗಿದ್ದು, ಈ ಬಗ್ಗೆ ಕಾಂಗ್ರೆಸ್‌ ಖಾರವಾಗಿ ಪ್ರತಿಕ್ರಿಯೆ ನೀಡಿದೆ.

ಈ ಕುರಿತು ಮಾತನಾಡಿರುವ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರಿನಾಟೆ, ಆಮ್ ಆದ್ಮಿ ಪಕ್ಷವನ್ನು ಗೆಲ್ಲಿಸುವುದು ಕಾಂಗ್ರೆಸ್‌ನ ಜವಾಬ್ದಾರಿಯಲ್ಲ. ಆಮ್ ಆದ್ಮಿ ಪಕ್ಷವನ್ನು ಗೆಲ್ಲಿಸುವ ಜವಾಬ್ದಾರಿ ಕಾಂಗ್ರೆಸ್‌ನ ಮೇಲಿಲ್ಲ. ನಾವು ಫಲವತ್ತಾದ ರಾಜಕೀಯ ಭದ್ರಕೋಟೆಗಳನ್ನು ಹುಡುಕುತ್ತೇವೆ ಮತ್ತು ಇವುಗಳನ್ನು ಗೆಲ್ಲಲು ಪ್ರಯತ್ನಿಸುತ್ತೇವೆ. ದೆಹಲಿಯು ನಾವು 15 ವರ್ಷಗಳಿಂದ ಸರ್ಕಾರದಲ್ಲಿರುವ ಸ್ಥಳವಾಗಿದೆ. ಇಲ್ಲಿ ಯಾವುದೇ ಪಕ್ಷದ ಮೇಲೂ ಕಾಂಗ್ರೆಸ್ ಅವಲಂಬಿತವಾಗಿಲ್ಲ ಎಂದು ಹೇಳಿದರು.

ನಮ್ಮ ಜವಾಬ್ದಾರಿ ಎಎಪಿಯನ್ನು ಗೆಲ್ಲಿಸುವುದು ಅಲ್ಲ. ನಮ್ಮ ಜವಾಬ್ದಾರಿ ಉತ್ಸಾಹಭರಿತ ಪ್ರಚಾರವನ್ನು ನಡೆಸುವುದು ಮತ್ತು ಈ ಚುನಾವಣೆಯಲ್ಲಿ (ಅಥವಾ ಯಾವುದೇ ಇತರ) ನಮಗೆ ಸಾಧ್ಯವಾದಷ್ಟು ಬಲವಾಗಿ ಸ್ಪರ್ಧಿಸುವುದು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments