Webdunia - Bharat's app for daily news and videos

Install App

ಇಂದು ಸಂಜೆ ಅಪ್ಪಳಿಸಲಿದೆ ಸೈಕ್ಲೋನ್

Webdunia
ಗುರುವಾರ, 15 ಜೂನ್ 2023 (11:28 IST)
ನವದೆಹಲಿ : ಉಗ್ರಸ್ವರೂಪ ಪಡೆದುಕೊಂಡು ಮುನ್ನುಗ್ಗುತ್ತಿರುವ ಬಿಪರ್ಜಾಯ್ ಚಂಡಮಾರುತ ಇಂದು ಸಂಜೆ ಗುಜರಾತ್ನ ಕಛ್ ತೀರಕ್ಕೆ ಅಪ್ಪಳಿಸಲಿದೆ.

ಸಂಜೆ 4 ಮತ್ತು ರಾತ್ರಿ 8 ಗಂಟೆಯ ಒಳಗಡೆ ಚಂಡಮಾರುತ ಕಛ್ ತೀರಕ್ಕೆ ಅಪ್ಪಳಿಸಿ ಪಾಕಿಸ್ತಾನದ ಕಡೆಗೆ ಸಾಗಲಿದೆ. ಕಳೆದ 58 ವರ್ಷಗಳಲ್ಲೇ ಜೂನ್ ತಿಂಗಳಲ್ಲಿ ಕಾಣಿಸಿಕೊಳ್ಳುತ್ತಿರುವ ದೊಡ್ಡ ಚಂಡಮಾರುತ ಇದಾಗಿದ್ದು ಅರಬ್ಬಿ ಸಮುದ್ರದ ಸಮೀಪದ ಪ್ರದೇಶಗಳಲ್ಲಿ ಭಾರೀ ಅನಾಹುತ ಸೃಷ್ಟಿಸಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

ಗುಜರಾತ್ನ ಸೌರಾಷ್ಟ್ರ, ಕಛ್, ಜಾಮ್ನಗರ, ದ್ವಾರಕಾ ಸೇರಿ 8 ಜಿಲ್ಲೆಗಳಿಗೆ ಹೈಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಮುದ್ರ ತೀರದಿಂದ 10 ಕಿ.ಮೀ. ಅಂತರದಲ್ಲಿನ ಸುಮಾರು 74 ಸಾವಿರ ಮಂದಿಯನ್ನು ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಾಗಿದೆ. 

ಪಶ್ಚಿಮ ರೈಲ್ವೇ 76 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಗಾಳಿಯ ವೇಗ ಗಂಟೆಗೆ 125 ರಿಂದ 150 ಕಿ.ಮೀ ಇರಲಿದ್ದು, ಪ್ರವಾಹ ಪರಿಸ್ಥಿತಿಯೂ ಎದುರಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments