Webdunia - Bharat's app for daily news and videos

Install App

ಮಂಗಳೂರಿನಲ್ಲಿ ಮೃತಪಟ್ಟ ವ್ಯಕ್ತಿಗೆ ಕಣ್ಣೂರಿನಲ್ಲಿ ಜೀವಂತ: ಶವಾಗಾರದಲ್ಲಿ ನಡೆದಿದ್ದೇನು ಗೊತ್ತಾ

Sampriya
ಬುಧವಾರ, 15 ಜನವರಿ 2025 (20:22 IST)
Photo Courtesy X
ತಿರುವನಂತಪುರಂ: ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ 67 ವರ್ಷದ ವ್ಯಕ್ತಿಗೆ ಕೇರಳದ ಕಣ್ಣೂರಿನ ಶವಾಗಾರದಲ್ಲಿ ಪುನರ್ಜನ್ಮ ದೊರಕಿದೆ.

ಕಣ್ಣೂರಿನ ಪಚಪೊಯ್ಕಾದ ವೆಲ್ಲುವಕ್ಕಂಡಿ ಪವಿತ್ರನ್ ಅವರು ಪಾರ್ಶ್ವವಾಯು ಹಾಗೂ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದರೂ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಜೀವರಕ್ಷಕ ಸಾಧನಗಳನ್ನು ಹಿಂತೆಗೆದುಕೊಳ್ಳುವುದಾಗಿ ಕುಟುಂಬಕ್ಕೆ ಆಸ್ಪತ್ರೆ ತಿಳಿಸಿತ್ತು. ಸೋಮವಾರ ಸಂಜೆಯ ವೇಳೆ ಪವಿತ್ರನ್‌ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಘೋಷಿಸಿತ್ತು.  

ಸೋಮವಾರ ಸಂಜೆ ಅವರ ಶವವನ್ನು ಅಂಬುಲೆನ್ಸ್‌ ಮೂಲಕ ಕಣ್ಣೂರಿಗೆ ರವಾನಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯಗೊಂಡ ಹಿನ್ನೆಲೆಯಲ್ಲಿ ರಾತ್ರಿ ಶವವವನ್ನು ಕಣ್ಣೂರಿನ ಎಕೆಜಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿ ಮಂಗಳವಾರ ಊರಿಗೆ ತೆಗೆದುಕೊಂಡು ಹೋಗಿ ಅಂತ್ಯಸಂಸ್ಕಾರ ನಡೆಸಲು ಕುಟುಂಬ ನಿರ್ಧರಿಸಿತ್ತು.

ರಾತ್ರಿ 11.30ರ ಹೊತ್ತಿಗೆ ಶವವನ್ನು ಶವಾಗಾರಕ್ಕೆ ಸ್ಥಳಾಂತರಿಸುತ್ತಿದ್ದಾಗ ಪವಿತ್ರನ್‌ ಕೈ ಅಲುಗಾಡುವನ್ನು ಕರ್ತವ್ಯದಲ್ಲಿದ್ದ ಅಟೆಂಡೆಂಟ್ ಜಯನ್ ಗಮನಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಆಸ್ಪತ್ರೆಯ ವೈದ್ಯಕೀಯ ತಂಡವು ದೇಹ ಪರೀಕ್ಷಿಸಿ ಪವಿತ್ರನ್ ಜೀವಂತವಾಗಿರುವುದನ್ನು ಎಂದು ದೃಢಪಡಿಸಿತು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ತಕ್ಷಣವೇ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಯಿತು. ಈಗ ಚಿಕಿತ್ಸೆಗೆ ಪವಿತ್ರನ್‌ ಸ್ಪಂದಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಈಗ ಮಂಗಳೂರಿನ ಖಾಸಗಿ ಆಸ್ಪತ್ರೆ ಮಾಡಿದ ಸಾವಿನ ದೃಢೀಕರಣದ ಬಗ್ಗೆ ಹಲವು ಪ್ರಶ್ನೆಗಳು ಸೃಷ್ಟಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments