ಗೂಡ್ಸ್ ರೈಲುಗಳ ನಡುವೆ ಅಪಘಾತ !

Webdunia
ಸೋಮವಾರ, 26 ಜೂನ್ 2023 (14:19 IST)
ಕೋಲ್ಕತ್ತಾ : 2 ಗೂಡ್ಸ್ ರೈಲುಗಳ ನಡುವೆ ಡಿಕ್ಕಿಯಾದ ಪರಿಣಾಮ ರೈಲಿನ ಹಲವು ಬೋಗಿಗಳು ಹಳಿ ತಪ್ಪಿದ ಘಟನೆ ಪಶ್ಚಿಮ ಬಂಗಾಳದ ಬಂಕುರಾದಲ್ಲಿ ನಡೆದಿದೆ.

ಭಾನುವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಒಂದು ಗೂಡ್ಸ್ ರೈಲಿನ ಹಿಂಬದಿಗೆ ಇನ್ನೊಂದು ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಘಟನೆಯಿಂದ ರೈಲಿನ 12 ಬೋಗಿಗಳು ಹಳಿತಪ್ಪಿವೆ. ಈ ರೈಲು ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಒಂದು ಗೂಡ್ಸ್ ರೈಲಿನ ಡ್ರೈವರ್ಗೆ ಅಪಘಾತದಿಂದ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.

ರೈಲ್ವೆ ಅಧಿಕಾರಿಗಳ ಪ್ರಕಾರ, ಎರಡೂ ಗೂಡ್ಸ್ ರೈಲುಗಳು ಖಾಲಿಯಾಗಿದ್ದು, ಅಪಘಾತವಾಗಲು ಕಾರಣವೇನು ಎಂಬುದು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಈ ಅವಘಡದಿಂದ ಆದ್ರಾ ವಿಭಾಗದ ರೈಲು ಸಂಚಾರಕ್ಕೆ ತೊಂದರೆಯಾಗಿದೆ.

ಆದ್ರಾ ವಿಭಾಗವು ಪಶ್ಚಿಮ ಬಂಗಾಳದ 4 ಜಿಲ್ಲೆಗಳಿಗೆ ಸೇವೆ ಕಲ್ಪಿಸುತ್ತಿದೆ. ಇದು ಆಗ್ನೇಯ ರೈಲ್ವೆಯ ಅಡಿಯಲ್ಲಿ ಬರುತ್ತದೆ. ಅಲ್ಲದೇ ಪಶ್ಚಿಮ ಮಿಡ್ನಾಪುರ, ಬಂಕುರಾ, ಪುರುಲಿಯಾ ಮತ್ತು ಬುರ್ದ್ವಾನ್ ಮತ್ತು ಜಾರ್ಖಂಡ್ನ ಮೂರು ಜಿಲ್ಲೆಗಳಾದ ಧನ್ಬಾದ್, ಬೊಕಾರೋ ಮತ್ತು ಸಿಂಗ್ಭೂಮ್ಗೆ ಸಂಚಾರ ಕಲ್ಪಿಸಲಾಗಿತ್ತು.

ಪುರುಲಿಯಾ ಎಕ್ಸ್ಪ್ರೆಸ್ನಂತಹ ರೈಲುಗಳು ಈ ವಿಭಾಗದಿಂದ ಚಲಿಸುವ ಸಾಧ್ಯತೆಯಿದ್ದು, ರೈಲ್ವೆ ಅಧಿಕಾರಿಗಳು ಆದಷ್ಟು ಬೇಗ ಅಪ್ಲೈನ್ ಅನ್ನು ತೆರೆಯಲು ಪ್ರತ್ನಿಸುತ್ತಿದ್ದಾರೆ. ಒಡಿಶಾ ತ್ರಿವಳಿ ರೈಲು ದುರಂತ ಸಂಭವಿಸಿದ ಒಂದು ತಿಂಗಳಲ್ಲಿ ಈ ಅಪಘಾತ ಸಂಭವಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾಗೆ 14 ದಿನ ನ್ಯಾಯಾಂಗ ಬಂಧನ

ದಾವಣಗೆರೆಯಲ್ಲಿ ಬಿಜೆಪಿ ಗೆಲುವಿಗೆ ಪಣ ತೊಟ್ಟು ಹೋರಾಡುತ್ತೇವೆ: ವಿಜಯೇಂದ್ರ

ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಬೆಂಗಳೂರಿಗೆ ವಾಪಸ್‌: ಶಾಸಕ ನಾಗೇಂದ್ರ ಕಾರ್ಯಕ್ಕೆ ಮೆಚ್ಚುಗೆ

ಬಿಹಾರ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ: ರಾಷ್ಟ್ರ ರಾಜಕಾರಣದತ್ತ ಮುಖ್ಯಮಂತ್ರಿ ನಿತೀಶ್‌ಕುಮಾರ್

ಯುದ್ಧದಿಂದ ತೈಲ ಸಂಕಷ್ಟಕ್ಕೀಡಾದ ಭಾರತಕ್ಕೆ ಮತ್ತೆ ರಷ್ಯಾವೇ ಆಪತ್ಬಾಂಧವ

ಮುಂದಿನ ಸುದ್ದಿ
Show comments