Webdunia - Bharat's app for daily news and videos

Install App

ಹಾಂಗ್ ಕಾಂಗ್ ಬಳಿಕ ಭಾರತದಲ್ಲೂ ಈ ಎರಡು ಮಸಾಲಾ ವಸ್ತುಗಳಿಗೆ ನಿಷೇಧ

Krishnaveni K
ಮಂಗಳವಾರ, 23 ಏಪ್ರಿಲ್ 2024 (10:00 IST)
ನವದೆಹಲಿ: ಭಾರತೀಯ ಮೂಲದ ಮಸಲಾ ವಸ್ತುಗಳ ತಯಾರಕರಾದ ಎವರೆಸ್ಟ್ ಉತ್ಪನ್ನಗಳನ್ನು ಹಾಂಗ್ ಕಾಂಗ್ ಇತ್ತೀಚೆಗೆ ಹಾನಿಕಾರಕ ಅಂಶವಿದೆ ಎಂಬ ಕಾರಣಕ್ಕೆ ನಿಷೇಧಿಸಿತ್ತು. ಇದರ ಬೆನ್ನಲ್ಲೇ ಈಗ ಭಾರತದಲ್ಲೂ ಈ ಉತ್ಪನ್ನಗಳು ನಿಷೇಧದ ಭೀತಿಯಲ್ಲಿದೆ.

ಎವರೆಸ್ಟ್ ಮಸಾಲಾದಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂದು ಪತ್ತೆಯಾದ ಹಿನ್ನಲೆಯಲ್ಲಿ ಹಾಂಗ್ ಕಾಂಗ್ ನ ಭಾರತದ ಈ ಉತ್ಪನ್ನಕ್ಕೆ ನಿಷೇಧ ಹೇರಿತ್ತು. ಇದರ ಬೆನ್ನಲ್ಲೇ ಭಾರತವೂ ಎಚ್ಚೆತ್ತುಕೊಂಡಿದೆ. ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗ (ಎಫ್ಎಸ್ಎಸ್ಎಐ) ಎವರೆಸ್ಟ್ ಮತ್ತು ಎಂಡಿಎಚ್ ಮಸಾಲ ಉತ್ಪನ್ನಗಳ ಗುಣಮಟ್ಟ ಪರೀಕ್ಷೆಗೆ ಆದೇಶಿಸಿದೆ.

ಈ ಎರಡೂ ಉತ್ಪನ್ನಗಳಲ್ಲೂ ಕ್ಯಾನ್ಸರ್ ಕಾರಕ ಅಂಶವಿದೆ ಎಂಬ ಆರೋಪಗಳ ಹಿನ್ನಲೆಯಲ್ಲಿ ಎಫ್ಎಸ್ಎಸ್ಎಐ ಈ ಉತ್ಪನ್ನಗಳಿಗೆ ನಿಷೇಧ ಹೇರುವ ನಿಟ್ಟಿನಲ್ಲಿ ಪರೀಕ್ಷೆಗೆ ಮುಂದಾಗಿದೆ. ಹಾಂಗ್ ಕಾಂಗ್ ಆಹಾರ ಗುಣಮಟ್ಟ ವಿಭಾಗ ಎಂಡಿಎಚ್ ನ ಸಾಂಬಾರ್ ಮಸಾಲ, ಮದ್ರಾಸ್ ಕರಿ ಮಸಾಲ ಮತ್ತು ಕರಿ ಪೌಡರ್ ಹಾಗೂ ಎವರೆಸ್ಟ್ ಬ್ರ್ಯಾಂಡ್ ನ ಫಿಶ್ ಕರಿ ಮಸಾಲವನ್ನು ಪರೀಕ್ಷೆಗೆ ಒಳಪಡಿಸಿತ್ತು. ಈ ವೇಳೆ ಕ್ಯಾನ್ಸರ್ ಕಾರಕವಾದ ಕಾರ್ಸಿನೋಜೆನಿಕ್ ಪೆಸ್ಟಿಸೈಡ್ ಇಥೆಲಿನ್ ಆಕ್ಸೈಡ್ ಪತ್ತೆಯಾಗಿತ್ತು ಎಂದು ತಿಳಿದುಬಂದಿತ್ತು.

ಇದೇ ಕಾರಣಕ್ಕೆ ಈಗ ಭಾರತದ ಆಹಾರ ಗುಣಮಟ್ಟ ವಿಭಾಗವೂ ಇವುಗಳನ್ನು ಪರೀಕ್ಷೆಗೊಳಪಡಿಸಲು ತೀರ್ಮಾನಿಸಿದೆ. ಒಂದು ವೇಳೆ ಪರೀಕ್ಷೆಯಲ್ಲಿ ಹಾನಿಕಾರಕ ಅಂಶ ದೃಢಪಟ್ಟರೆ ಭಾರತದಲ್ಲೂ ಈ ಎರಡು ಉತ್ಪನ್ನಗಳಿಗೆ ನಿಷೇಧ ಹೇರಲಾಗುತ್ತದೆ.
ಅರಸೀಕೆರೆ: ಸಿಎಂ ಸಿದ್ದರಾಮಯ್ಯ ಸರ್ಕಾರದ ಮಹಿಳೆಯರಿಗೆ ಉಚಿತ ಬಸ್ ಟಿಕೆಟ್ ಘೋಷಣೆ ಕೆಲವರಿಗೆ ಅನುಕೂಲವಾದರೆ ಮತ್ತೆ ಕೆಲವರು ಅದನ್ನು ಟೀಕಿಸಿದ್ದೂ ಇದೆ. ಇದೀಗ ವಿದ್ಯಾರ್ಥಿನಿಯೊಬ್ಬರು ಸಿದ್ದರಾಮಯ್ಯಗೆ ವಿಶಿಷ್ಟವಾಗಿ ಈ ಕೊಡುಗೆ ನೀಡಿದ್ದಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments