Webdunia - Bharat's app for daily news and videos

Install App

ಆರ್‌ಎಸ್‌ಎಸ್‌ ವಿರುದ್ಧ ಕಾಂಗ್ರೆಸ್‌ನಿಂದ ಪ್ರತ್ಯೇಕ ಪಡೆ?

Webdunia
ಭಾನುವಾರ, 15 ಮೇ 2022 (10:20 IST)
ನವದೆಹಲಿ:  ಬಿಜೆಪಿಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಹೇಳಲಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರ ವಿರುದ್ಧ ತನ್ನದೇ ಆದ ಪಡೆ ಸೃಷ್ಟಿಸುವ ಪ್ರಸ್ತಾಪವನ್ನು ಕಾಂಗ್ರೆಸ್‌ ಗಂಭೀರವಾಗಿ ಪರಿಗಣಿಸುತ್ತಿದೆ. ದೇಶಾದ್ಯಂತ ಪ್ರತಿ ಬ್ಲಾಕ್‌ ಹಂತದಲ್ಲಿ ಸಂಘ ವಿರೋಧಿ ಕಾರ್ಯಕರ್ತರನ್ನು ನೇಮಕ ಮಾಡುವ ಮೂಲಕ ಆರ್‌ಎಸ್‌ಎಸ್‌ ಕಾರ್ಯಕರ್ತರ ತಂತ್ರವನ್ನು ನಿಷ್ಫಲಗೊಳಿಸಲು ಕಾಂಗ್ರೆಸ್‌ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
 
ಹಿರಿಯ ನಾಯಕ ಸಲ್ಮಾನ್‌ ಖುರ್ಷಿದ್‌ ನೇತೃತ್ವದ ಸಾಮಾಜಿಕ ನ್ಯಾಯ ಸಮಿತಿ ಪಕ್ಷದ ಪುನರುತ್ಥಾನಕ್ಕೆ ಹಲವು ಅಂಶಗಳನ್ನು ಸೂಚಿಸಿದ್ದು, ಅದರಲ್ಲಿ ಆರ್‌ಎಸ್‌ಎಸ್‌ ವಿರುದ್ಧ ಕಾರ್ಯಕರ್ತರ ಪಡೆ ಸೃಷ್ಟಿ ಅಂಶವೂ ಇದೆ.
ಇಂತಹ ಕಾರ್ಯಕರ್ತನಿಗೆ ಸ್ಥಳೀಯ ಭಾಷೆ ಗೊತ್ತಿರಬೇಕು. ಸಾಮಾಜಿಕ ಜಾಲತಾಣ ಬಳಕೆ, ಬೂತ್‌ ನಿರ್ವಹಣೆಯಲ್ಲಿ ಪರಿಣತಿ ಹೊಂದಿರಬೇಕು ಎಂದು ಸಮಿತಿ ಸಲಹೆ ಮಾಡಿದೆ.
 
ಇದೇ ವೇಳೆ, ಪಕ್ಷದ ಅರ್ಧದಷ್ಟು ಹುದ್ದೆಗಳನ್ನು ದಲಿತರು, ಬುಡಕಟ್ಟು ವರ್ಗ, ಒಬಿಸಿ ಹಾಗೂ ಅಲ್ಪಸಂಖ್ಯಾತರಿಗೆ ನೀಡಬೇಕು. ತೃತೀಯ ಲಿಂಗಿಗಳಿಗೂ ಸಾಕಷ್ಟು ಪ್ರಾತಿನಿಧ್ಯ ಕೊಡಬೇಕು. ಐದು ವರ್ಷಗಳ ಕಾಲ ಎಸ್ಸಿ, ಎಸ್ಟಿ, ಒಬಿಸಿ, ಅಲ್ಪಸಂಖ್ಯಾತ ವಿಭಾಗ ಹಾಗೂ ಮಹಿಳಾ ಕಾಂಗ್ರೆಸ್‌ನಲ್ಲಿ ಸೇವೆ ಸಲ್ಲಿಸಿದವರಿಗೆ ಪಕ್ಷದ ಪ್ರಮುಖ ಸಮಿತಿಗಳಲ್ಲಿ ಸ್ಥಾನ ಕೊಡಬೇಕು. ದೇಶದ ಜನಸಂಖ್ಯೆ, ಗುರುತು, ಅಲ್ಲಿನ ಸಮಸ್ಯೆಗಳು, ದಲಿತರು, ಬುಡಕಟ್ಟು ವರ್ಗ, ಒಬಿಸಿ ಹಾಗೂ ಅಲ್ಪಸಂಖ್ಯಾತರ ಪ್ರಾತಿನಿಧ್ಯ ಕುರಿತು ಸರಣಿ ಸಮೀಕ್ಷೆಗಳನ್ನು ನಡೆಸಬೇಕು. ಈ ಅಧ್ಯಯನ ಒಂದು ತಿಂಗಳಲ್ಲಿ ನಡೆಯಬೇಕು. ಈ ಮಾಹಿತಿಯನ್ನು ಎಐಸಿಸಿ, ರಾಜ್ಯ ಹಾಗೂ ಜಿಲ್ಲಾ ಘಟಕಗಳು ಚುನಾವಣೆಗೆ ಬಳಸಬೇಕು ಎಂದು ಹೇಳಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments