Publish Date: Tue, 10 Sep 2019 (11:59 IST)
Updated Date: Tue, 10 Sep 2019 (12:01 IST)
ನವದೆಹಲಿ: ಇಂದು ಬೆಳ್ಳಂಬೆಳಗ್ಗೆ ದೆಹಲಿಯಲ್ಲಿರುವ ಡಿಕೆಶಿ ಆಪ್ತನ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರ ಆಪ್ತ ಆಂಜನೇಯ ಹನುಮಂತಯ್ಯ ಮನೆ ಮೇಲೆ 'ಇಡಿ' ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಪಾರ್ಟ್ಮೆಂಟ್ ನಲ್ಲಿ ಸಿಕ್ಕ ಹಣದ ಲೆಕ್ಕ ನೀಡಲು ವಿಫಲರಾಗಿ ಜೈಲು ಸೇರಿರುವ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಆಪ್ತನ ಮನೆ ಮೇಲೆ ಇದೀಗ ಇಡಿ ಅಧಿಕಾರಿಗಳು ದಾಳಿ ನಡೆಸವುದರ ಮೂಲಕ ಮತ್ತೆ ಡಿಕೆಶಿಗೆ ಬಿಗ್ ಶಾಕ್ ನೀಡಿದ್ದಾರೆ.